ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಮೈಸೂರು,ಜೂ11,Tv10 ಕನ್ನಡ

ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿ ವಸತಿಯುಕ್ತ ಕೇಂದ್ರಕ್ಕೆ ನೀಡಲಾದ ಸಿಎ ನಿವೇಶನವನ್ನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಮುಡಾ ವಲಯ ಕಚೇರಿ 4 ರ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನವನ್ನ ರದ್ದುಪಡಿಸಿ ಹಿಂದಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯನಗರ 2 ನೇ ಹಂತ ಸಿಎ ನಿವೇಶನ ಸಂಖ್ಯೆ 25 ನ್ನು ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿಯುಕ್ತ ವಸತಿಕೇಂದ್ರ ಕ್ಕೆ ಮಂಜೂರು ಮಾಡಲಾಗಿದೆ.ಆದರೆ ಸದರಿ ನಿವೇಶನವನ್ನ ಇಬ್ಬಾಗ ಮಾಡಿ ಅನಧಿಕೃತವಾಗಿ ನೇಹಾ ಕ್ಯಾಂಟೀನ್ ರವರಿಗಾಗಿ ಕಟ್ಟಡ ನಿರ್ಮಿಸಿ ಬಾಡಿಗೆ ನೀಡಿರುವುದು ಕಂಡು ಬಂದಿದೆ.ಅಲ್ಲದೆ ಪಕ್ಕದಲ್ಲಿರುವ ಕೆರೆಯ ಬಫರ್ ಜೋನ್ ಜಾಗವನ್ನೂ ಸಹ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದೆ.ಈ ಬಗ್ಗೆ ದಾಖಲೆಗಳು Tv10 ಕನ್ನಡ ವಾಹಿನಿಗೆ ತಲುಪಿದೆ.ಈ ಆರೋಪದ ಹಿನ್ನಲೆ ವಲಯ ಕಚೇರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮೇಲ್ನೋಟಕ್ಕೆ ನಿಯಮಗಳನ್ನ ಉಲ್ಲಂಘಿಸಿರುವುದು ಸಾಬೀತಾದ ಹಿನ್ನಲೆ ಸಂಸ್ಥೆ ಮುಖ್ಯಸ್ಥರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲಾತಿಗಳ ಸಮೇತ ಹಾಜರಾಗಿ ಸಮಜಾಯಿಷಿ ನೀಡಬೇಕು ಹಾಗೂ ಬಫರ್ ಜಾಗದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಎಚ್ಚೆರಿಕೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನ ರದ್ದುಪಡಿಸಿ ಹಿಂಪಡೆಯುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ವಾರ್ನಿಂಗ್ ನೀಡಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *