ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದ ಪ್ರಿಯತಮ ಭೀಕರ ಕೊಲೆ…ಪ್ರಿಯತಮೆ,ಸಹೋದರ ಅಂದರ್…

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದ ಪ್ರಿಯತಮ ಭೀಕರ ಕೊಲೆ…ಪ್ರಿಯತಮೆ,ಸಹೋದರ ಅಂದರ್…

ನಂಜನಗೂಡು,ಜೂ11,Tv10 ಕನ್ನಡ

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನ ಪ್ರಿಯತಮೆ ಹಾಗೂ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.ಹೆಚ್.ಡಿ.ಕೋಟೆ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.ಈತನ ಮೇಲೆ ಕಲ್ಲುಚಪ್ಪಡಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳು.

ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು.ಒಂದು ತಿಂಗಳ ಹಿಂದೆ ಪ್ರೇಮಾ ಪತಿ ತೀರಿಕೊಂಡಿದ್ದರು.ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದ.ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ.ಪರಿಚಯ ಸಲುಗೆ ಬೆಳೆದು ಅಕ್ರಮ ಸಂಭಂಧಕ್ಕೆ ತಿರುಗಿತ್ತು.ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು.ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾ ಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನ ಮನೆಗೆ ಕರೆಸಿಕೊಂಡಿದ್ದಾಳೆ.ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ.ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ.ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜೊತೆ ಜಗಳವಾಡಿ ಕಲ್ಲು ಚೆಪ್ಪಡಿಯನ್ನ ತಲೆ ಮೇಲೆ ಹಾಕಿ ಭೀಕರವಾಗಿ ಕೊಂದಿದ್ದಾರೆ.ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆದಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *