ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದ ಪ್ರಿಯತಮ ಭೀಕರ ಕೊಲೆ…ಪ್ರಿಯತಮೆ,ಸಹೋದರ ಅಂದರ್…

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದ ಪ್ರಿಯತಮ ಭೀಕರ ಕೊಲೆ…ಪ್ರಿಯತಮೆ,ಸಹೋದರ ಅಂದರ್…

ನಂಜನಗೂಡು,ಜೂ11,Tv10 ಕನ್ನಡ

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನ ಪ್ರಿಯತಮೆ ಹಾಗೂ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.ಹೆಚ್.ಡಿ.ಕೋಟೆ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.ಈತನ ಮೇಲೆ ಕಲ್ಲುಚಪ್ಪಡಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳು.

ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು.ಒಂದು ತಿಂಗಳ ಹಿಂದೆ ಪ್ರೇಮಾ ಪತಿ ತೀರಿಕೊಂಡಿದ್ದರು.ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದ.ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ.ಪರಿಚಯ ಸಲುಗೆ ಬೆಳೆದು ಅಕ್ರಮ ಸಂಭಂಧಕ್ಕೆ ತಿರುಗಿತ್ತು.ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು.ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾ ಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನ ಮನೆಗೆ ಕರೆಸಿಕೊಂಡಿದ್ದಾಳೆ.ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ.ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ.ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜೊತೆ ಜಗಳವಾಡಿ ಕಲ್ಲು ಚೆಪ್ಪಡಿಯನ್ನ ತಲೆ ಮೇಲೆ ಹಾಕಿ ಭೀಕರವಾಗಿ ಕೊಂದಿದ್ದಾರೆ.ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆದಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *