ಸಿಕ್ರೇಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ನಗದು ಚಿನ್ನಾಭರಣ ದೋಚಿದ ಖದೀಮರು…40 ಗ್ರಾಂ ಚಿನ್ನ 80 ಸಾವಿರ ನಗದು ಕಳುವು…

ಸಿಕ್ರೇಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ನಗದು ಚಿನ್ನಾಭರಣ ದೋಚಿದ ಖದೀಮರು…40 ಗ್ರಾಂ ಚಿನ್ನ 80 ಸಾವಿರ ನಗದು ಕಳುವು…

ಟಿ.ನರಸೀಪುರ,ಜೂ12,Tv10 ಕನ್ನಡ

ಸಿಕ್ರೆಟ್ ಪ್ಲೇಸ್ ನಲ್ಲಿ ಇರಿಸಿದ್ದ ಕೀ ಬಳಸಿ 1.80 ಲಕ್ಷ ಮೌಲ್ಯದ 40 ಗ್ರಾಂ ಚಿನ್ನಾಭರಣ ಹಾಗೂ 80 ಸಾವಿರ ನಗದು ದೋಚಿ ಪರಾರಿಯಾದ ಘಟನೆ ಟಿ.ನರಸೀಪುರ ತಾಲೂಕು ತುಂಬಲ ಗ್ರಾಮದ ಬೆಳ್ಳಬೆಳಕು ಬಡಾವಣೆಯಲ್ಲಿ ನಡೆದಿದೆ.ಸುಮ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ.ಗೋಲಕದಲ್ಲಿ ಇಡಲಾಗಿದ್ದ 80 ಸಾವಿರ ನಗದು ಹಾಗೂ ಬೀರುವಿನಲ್ಲಿದ್ದ 40 ಗ್ರಾಂ ಚಿನ್ನಾಭರಣ ದೋಚಿದ ಖದೀಮರು ಪರಾರಿಯಾಗಿದ್ದಾರೆ.

ಮನೆಯಿಂದ ಹೊರಗಡೆ ತೆರಳುವ ವೇಳೆ ಪತಿ ಅಥವಾ ಮಗನ ಅನುಕೂಲಕ್ಕಾಗಿ ಕೀಗಳನ್ನ ಸೀಕ್ರೆಟ್ ಜಾಗದಲ್ಲಿ ಸುಮ ಇರಿಸಿ ಹೋಗುತ್ತಿದ್ದರು.ಇದನ್ನ ಸೂಕ್ಷ್ಮವಾಗಿ ಗಮನಿಸಿಕೊಂಡಿದ್ದ ಖದೀಮರು ಸುಮ ಹಾಗೂ ಪತಿ ಮನೆಯಿಂದ ಹೊರಗಡೆ ತೆರಳಿದ ಸಂಧರ್ಭವನ್ನ ಬಳಸಿ ಸೀಕ್ರೆಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ಕೃತ್ಯವೆಸಗಿದ್ದಾರೆ.ಮಾಜಿ ಶಾಸಕ ಅಶ್ವಿನ್ ಕುಮಾರ್ ರವರ ತೋಟದ ಮನೆಯ ಮುಂಭಾಗದಲ್ಲೇ ಕೃತ್ಯ ನಡೆದಿದೆ.ತೋಟದ ಮನೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಳ್ಳರ ಕೈಚಳಕ ಸೆರೆಯಾಗಿರುವ ಸಾಧ್ಯತೆ ಇದೆ ಎಂದು ಸುಮ ರವರು ಪೊಲೀಸರಿಗೆ ತಿಳಿಸಿದ್ದಾರೆ.ಸಿಸಿ ಕ್ಯಾಮರಾ ದೃಶ್ಯಗಳನ್ನ ಸಂಗ್ರಹಿಸಿರುವ ಟಿ.ನರಸೀಪುರ ಪೊಲೀಸರು ಖದೀಮರ ಸೆರೆಗೆ ಜಾಲ ಬೀಸಿದ್ದಾರೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *