ಸಿಕ್ರೇಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ನಗದು ಚಿನ್ನಾಭರಣ ದೋಚಿದ ಖದೀಮರು…40 ಗ್ರಾಂ ಚಿನ್ನ 80 ಸಾವಿರ ನಗದು ಕಳುವು…

ಸಿಕ್ರೇಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ನಗದು ಚಿನ್ನಾಭರಣ ದೋಚಿದ ಖದೀಮರು…40 ಗ್ರಾಂ ಚಿನ್ನ 80 ಸಾವಿರ ನಗದು ಕಳುವು…

ಟಿ.ನರಸೀಪುರ,ಜೂ12,Tv10 ಕನ್ನಡ

ಸಿಕ್ರೆಟ್ ಪ್ಲೇಸ್ ನಲ್ಲಿ ಇರಿಸಿದ್ದ ಕೀ ಬಳಸಿ 1.80 ಲಕ್ಷ ಮೌಲ್ಯದ 40 ಗ್ರಾಂ ಚಿನ್ನಾಭರಣ ಹಾಗೂ 80 ಸಾವಿರ ನಗದು ದೋಚಿ ಪರಾರಿಯಾದ ಘಟನೆ ಟಿ.ನರಸೀಪುರ ತಾಲೂಕು ತುಂಬಲ ಗ್ರಾಮದ ಬೆಳ್ಳಬೆಳಕು ಬಡಾವಣೆಯಲ್ಲಿ ನಡೆದಿದೆ.ಸುಮ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ.ಗೋಲಕದಲ್ಲಿ ಇಡಲಾಗಿದ್ದ 80 ಸಾವಿರ ನಗದು ಹಾಗೂ ಬೀರುವಿನಲ್ಲಿದ್ದ 40 ಗ್ರಾಂ ಚಿನ್ನಾಭರಣ ದೋಚಿದ ಖದೀಮರು ಪರಾರಿಯಾಗಿದ್ದಾರೆ.

ಮನೆಯಿಂದ ಹೊರಗಡೆ ತೆರಳುವ ವೇಳೆ ಪತಿ ಅಥವಾ ಮಗನ ಅನುಕೂಲಕ್ಕಾಗಿ ಕೀಗಳನ್ನ ಸೀಕ್ರೆಟ್ ಜಾಗದಲ್ಲಿ ಸುಮ ಇರಿಸಿ ಹೋಗುತ್ತಿದ್ದರು.ಇದನ್ನ ಸೂಕ್ಷ್ಮವಾಗಿ ಗಮನಿಸಿಕೊಂಡಿದ್ದ ಖದೀಮರು ಸುಮ ಹಾಗೂ ಪತಿ ಮನೆಯಿಂದ ಹೊರಗಡೆ ತೆರಳಿದ ಸಂಧರ್ಭವನ್ನ ಬಳಸಿ ಸೀಕ್ರೆಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ಕೃತ್ಯವೆಸಗಿದ್ದಾರೆ.ಮಾಜಿ ಶಾಸಕ ಅಶ್ವಿನ್ ಕುಮಾರ್ ರವರ ತೋಟದ ಮನೆಯ ಮುಂಭಾಗದಲ್ಲೇ ಕೃತ್ಯ ನಡೆದಿದೆ.ತೋಟದ ಮನೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಳ್ಳರ ಕೈಚಳಕ ಸೆರೆಯಾಗಿರುವ ಸಾಧ್ಯತೆ ಇದೆ ಎಂದು ಸುಮ ರವರು ಪೊಲೀಸರಿಗೆ ತಿಳಿಸಿದ್ದಾರೆ.ಸಿಸಿ ಕ್ಯಾಮರಾ ದೃಶ್ಯಗಳನ್ನ ಸಂಗ್ರಹಿಸಿರುವ ಟಿ.ನರಸೀಪುರ ಪೊಲೀಸರು ಖದೀಮರ ಸೆರೆಗೆ ಜಾಲ ಬೀಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *