ಸಿಕ್ರೇಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ನಗದು ಚಿನ್ನಾಭರಣ ದೋಚಿದ ಖದೀಮರು…40 ಗ್ರಾಂ ಚಿನ್ನ 80 ಸಾವಿರ ನಗದು ಕಳುವು…

ಸಿಕ್ರೇಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ನಗದು ಚಿನ್ನಾಭರಣ ದೋಚಿದ ಖದೀಮರು…40 ಗ್ರಾಂ ಚಿನ್ನ 80 ಸಾವಿರ ನಗದು ಕಳುವು…

ಟಿ.ನರಸೀಪುರ,ಜೂ12,Tv10 ಕನ್ನಡ

ಸಿಕ್ರೆಟ್ ಪ್ಲೇಸ್ ನಲ್ಲಿ ಇರಿಸಿದ್ದ ಕೀ ಬಳಸಿ 1.80 ಲಕ್ಷ ಮೌಲ್ಯದ 40 ಗ್ರಾಂ ಚಿನ್ನಾಭರಣ ಹಾಗೂ 80 ಸಾವಿರ ನಗದು ದೋಚಿ ಪರಾರಿಯಾದ ಘಟನೆ ಟಿ.ನರಸೀಪುರ ತಾಲೂಕು ತುಂಬಲ ಗ್ರಾಮದ ಬೆಳ್ಳಬೆಳಕು ಬಡಾವಣೆಯಲ್ಲಿ ನಡೆದಿದೆ.ಸುಮ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ.ಗೋಲಕದಲ್ಲಿ ಇಡಲಾಗಿದ್ದ 80 ಸಾವಿರ ನಗದು ಹಾಗೂ ಬೀರುವಿನಲ್ಲಿದ್ದ 40 ಗ್ರಾಂ ಚಿನ್ನಾಭರಣ ದೋಚಿದ ಖದೀಮರು ಪರಾರಿಯಾಗಿದ್ದಾರೆ.

ಮನೆಯಿಂದ ಹೊರಗಡೆ ತೆರಳುವ ವೇಳೆ ಪತಿ ಅಥವಾ ಮಗನ ಅನುಕೂಲಕ್ಕಾಗಿ ಕೀಗಳನ್ನ ಸೀಕ್ರೆಟ್ ಜಾಗದಲ್ಲಿ ಸುಮ ಇರಿಸಿ ಹೋಗುತ್ತಿದ್ದರು.ಇದನ್ನ ಸೂಕ್ಷ್ಮವಾಗಿ ಗಮನಿಸಿಕೊಂಡಿದ್ದ ಖದೀಮರು ಸುಮ ಹಾಗೂ ಪತಿ ಮನೆಯಿಂದ ಹೊರಗಡೆ ತೆರಳಿದ ಸಂಧರ್ಭವನ್ನ ಬಳಸಿ ಸೀಕ್ರೆಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ಕೃತ್ಯವೆಸಗಿದ್ದಾರೆ.ಮಾಜಿ ಶಾಸಕ ಅಶ್ವಿನ್ ಕುಮಾರ್ ರವರ ತೋಟದ ಮನೆಯ ಮುಂಭಾಗದಲ್ಲೇ ಕೃತ್ಯ ನಡೆದಿದೆ.ತೋಟದ ಮನೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಳ್ಳರ ಕೈಚಳಕ ಸೆರೆಯಾಗಿರುವ ಸಾಧ್ಯತೆ ಇದೆ ಎಂದು ಸುಮ ರವರು ಪೊಲೀಸರಿಗೆ ತಿಳಿಸಿದ್ದಾರೆ.ಸಿಸಿ ಕ್ಯಾಮರಾ ದೃಶ್ಯಗಳನ್ನ ಸಂಗ್ರಹಿಸಿರುವ ಟಿ.ನರಸೀಪುರ ಪೊಲೀಸರು ಖದೀಮರ ಸೆರೆಗೆ ಜಾಲ ಬೀಸಿದ್ದಾರೆ…

Spread the love

Related post

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮೈಸೂರು,ಏ30,Tv10 ಕನ್ನಡ ನಿನ್ನೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದೆ.ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ…
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ ಆಸ್ತಿ ಕಬಳಿಸಲು ದಾಖಲೆ ಮಾಡಿಕೊಟ್ಟ ಆರೋಪ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ…

ಮೈಸೂರು,ಏ29,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಮತ್ತೊಂದು ವಿಕೆಟ್ ಉರುಳಲಿದೆ.ಕೆಲವೇ ದಿನಗಳ ಹಿಂದೆ ಒಬ್ಬರನ್ನ ಅಮಾನತುಗೊಳಿಸಿದ್ದ ಆಯುಕ್ತರು ಇಂದು ಮತ್ತೊಬ್ಬ ಅಧಿಕಾರಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ.ಸೂಕ್ತ…
ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ…ಕಿರುಚಿತ್ರ,ಸಾಕ್ಷ್ಯಚಿತ್ರಗಳಿಗೆ ಆಹ್ವಾನ…

ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್…

ಮೈಸೂರು,ಏ28,Tv10 ಕನ್ನಡ ಮೈಸೂರು ಸಿನಿಮಾ ಸೊಸೈಟಿಯ ಪ್ರಮುಖ ಚಿತ್ರೋತ್ಸವವಾದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ ಮಾಡಲಾಯಿತು. 6/02/2026 ರಿಂದ 8/02/2026 ವರೆಗೆ ನಡೆಯುವ ಚಿತ್ರೋತ್ಸವವನ್ನ ವಿದ್ಯಾರ್ಥಿ ಮತ್ತು…

Leave a Reply

Your email address will not be published. Required fields are marked *