ಜೂನ್ 21 ವಿಶ್ವಯೋಗ ದಿನಾಚರಣೆ… ಅರ್ಥಪೂರ್ಣವಾಗಿ ಆಚರಣೆ…ಸಂಸದ ಯದುವೀರ್.

ಜೂನ್ 21 ವಿಶ್ವಯೋಗ ದಿನಾಚರಣೆ… ಅರ್ಥಪೂರ್ಣವಾಗಿ ಆಚರಣೆ…ಸಂಸದ ಯದುವೀರ್.

  • Mysore
  • June 14, 2024
  • No Comment
  • 143

ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್ ಅವರು ತಿಳಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾನು ಪ್ರತಿ ವರ್ಷ ಯೋಗ ದಿನಾಚರಣೆ ಯಲ್ಲಿ ಭಾಗವಹಿಸುತ್ತೇನೆ. ಸರ್ಕಾರದಿಂದ ನೀಡಿರುವ 1 ಲಕ್ಷ ಅನುದಾನದ ಜೊತೆಗೆ ವಿವಿಧ ದಾನಿಗಳಿಂದ ಅನುದಾನವನ್ನು ಪಡೆದು ಸದ್ಬಳಕೆ ಮಾಡಿ ಯೋಗ ದಿನಾಚರಣೆ ಆಯೋಜನೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ ಮೈಸೂರಿನ ಯೋಗವು ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದೆ. ರಾಜ್ಯ ಸರ್ಕಾರದಿಂದ ಜಿಲ್ಲಾ ಮಟ್ಟಕ್ಕೆ ಯೋಗ ದಿನಾಚರಣೆ ಆಯೋಜನೆಗೆ 1 ಲಕ್ಷ ಅನುದಾನ ಬರುತ್ತದೆ. ಯೋಗವನ್ನು ಅರಮನೆಯ ಮುಂಭಾಗದಲ್ಲಿ ಆಯೋಜನೆ ಮಾಡಲಾಗುವುದು. ಅಂದು ಬೆಳಿಗ್ಗೆ 7 ಗಂಟೆಗೆ ಯೋಗ ಪ್ರಾರಂಭವಾಗುವುದು. ಕನಿಷ್ಠ 10 ಸಾವಿರ ಯೋಗಪಟುಗಳು ಭಾಗವಹಿಸುವರು ಎಂದರು.

ಸರ್ಕಾರದ ಶಿಷ್ಟಾಚಾರ ಪಾಲನೆ ಮಾಡಿ ಯೋಗ ದಿನಾಚರಣೆಯನ್ನು ಆಯೋಜನೆ ಮಾಡಲಾಗುವುದು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮ ಬೆಳಗ್ಗೆ 6.30 ಕ್ಕೆ ಪ್ರಾರಂಭವಾಗುವುದು. ಅಚ್ಚುಕಟ್ಟಾಗಿ ಯೋಗ ದಿನಾಚರಣೆ ಆಯೋಜನೆಗೆ ವಿವಿಧ ಇಲಾಖೆಗಳಿಗೆ ನಿಯೋಜಿಸುವ ಕಾರ್ಯಗಳನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *