ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ಮೈಸೂರು,ಜೂ19,Tv10 ಕನ್ನಡ

ನಕಲಿ ಕೀ ಬಳಸಿ ಬಾಡಿಗೆ ನೀಡಿದ್ದ ಮನೆಯನ್ನ ಮಾಲೀಕನೇ ದೋಚಿದ ಘಟನೆ ಮೈಸೂರಿನ ಲೋಕನಾಯಕನಗರದಲ್ಲಿ ನಡೆದಿದೆ.ಸರ್ವಸ್ವವನ್ನೂ ಕಳೆದುಕೊಂಡ ಬಾಡಿಗೆದಾರ ಇದೀಗ ಅತಂತ್ರವಾಗಿದ್ದಾರೆ.ಫುಡ್ ಪ್ರಾಡಕ್ಟ್ಸ್ ಡಿಸ್ಟ್ರಿಬ್ಯೂಟರ್ ಆಗಿರುವ ಮೇಘರಾಜ್ ರವರ ಕುಟುಂಬ ಇದೀಗ ಅತಂತ್ರಕ್ಕೆ ಸಿಲುಕಿದೆ.ಮಾಲೀಕ ಮಂಜುನಾಥ್ ಹಾಗೂ ಈತನ ಸಹೋದರನ ಮೇಲೆ ಮೇಘರಾಜ್ ರವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಂಜುನಾಥ್ ರವರಿಗೆ ಸೇರಿದ ಮನೆಗೆ ಮೇಘರಾಜ್ ಸುಮಾರು 6 ತಿಂಗಳ ಹಿಂದೆ ಬಾಡಿಗೆ ಪಡೆದು ವಾಸಕ್ಕೆ ಬಂದಿದ್ದಾರೆ. ಬಾಡಿಗೆ ವಿಚಾರದಲ್ಲಿ ಮೇಘರಾಜ್ ಹಾಗೂ ಮಂಜುನಾಥ್ ನಡುವೆ ವಿವಾದ ಶುರುವಾಗಿದೆ.ತಾವು ನೀಡಿದ್ದ ಮುಂಗಡ ಹಣ ವಾಪಸ್ ಪಡೆದು ಮನೆ ಖಾಲಿ ಮಾಡಲು ಮೇಘರಾಜ್ ನಿರ್ಧರಿಸಿದ್ದಾರೆ. ಇದಕ್ಕೆ ಒಪ್ಪದ ಮಂಜುನಾಥ್ ಮನೆಗೆ ಬೀಗ ಜಡಿದು ದರ್ಪ ತೋರಿಸಿದ್ದಾರೆ.ಈ ಕುರಿತಂತೆ ಮೇಘರಾಜ್ ಮೇಟಗಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಮಂಜುನಾಥ್ ರವರನ್ನ ಕರೆಸಿ ಪೊಲೀಸರು ಬುದ್ದಿವಾದ ಹೇಳಿ ಬೀಗ ತೆಗೆಸಿದ್ದಾರೆ.ಹೀಗಿದ್ದರೂ ಆಗಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಕಿರುಕುಳ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮೇಘರಾಜ್ ರವರು ಕುಟುಂಬ ಸಮೇತ ತಮ್ಮ ಸ್ವಂತ ಊರಾದ ಕಬ್ಬಳಿಗೆರೆಗೆ ತೆರಳಿದ್ದಾರೆ.ಹಿಂದಿರುಗಿ ಬರುವಷ್ಟರಲ್ಲಿ ಮಂಜುನಾಥ್ ಮತ್ತೆ ಮನೆಗೆ ಬೀಗ ಹಾಕಿದ್ದಾರೆ.ಕಿಟಕಿ ಮೂಲಕ ಮನೆ ಒಳಗೆ ಪರಿಶೀಲಸಿದಾಗ ಪೀಠೋಪಕರಣಗಳ ಸಮೇತ ನಗದು ಚಿನ್ನಾಭರಣ ನಾಪತ್ತೆಯಾಗಿದೆ.ಸುಮಾರು 85 ಗ್ರಾಂ ಚಿನ್ನಾಭರಣ,1.20 ಲಕ್ಷ ನಗದು,ಫ್ರಿಡ್ಜ್,ವಾಶಿಂಗ್ ಮೆಷಿನ್,ಹರ್ಬಲ್ ಪ್ರಾಡಕ್ಟ್ಸ್ ಗಳು ನಾಪತ್ತೆಯಾಗಿದೆ.ನಕಲಿ ಕೀ ಬಳಸಿ ಮಾಲೀಕ ಮಂಜುನಾಥ್ ತಮ್ಮ ಪದಾರ್ಥಗಳನ್ನ ದೋಚಿದ್ದಾರೆಂದು ಮೇಘರಾಜ್ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *