ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ಮೈಸೂರು,ಜೂ19,Tv10 ಕನ್ನಡ

ನಕಲಿ ಕೀ ಬಳಸಿ ಬಾಡಿಗೆ ನೀಡಿದ್ದ ಮನೆಯನ್ನ ಮಾಲೀಕನೇ ದೋಚಿದ ಘಟನೆ ಮೈಸೂರಿನ ಲೋಕನಾಯಕನಗರದಲ್ಲಿ ನಡೆದಿದೆ.ಸರ್ವಸ್ವವನ್ನೂ ಕಳೆದುಕೊಂಡ ಬಾಡಿಗೆದಾರ ಇದೀಗ ಅತಂತ್ರವಾಗಿದ್ದಾರೆ.ಫುಡ್ ಪ್ರಾಡಕ್ಟ್ಸ್ ಡಿಸ್ಟ್ರಿಬ್ಯೂಟರ್ ಆಗಿರುವ ಮೇಘರಾಜ್ ರವರ ಕುಟುಂಬ ಇದೀಗ ಅತಂತ್ರಕ್ಕೆ ಸಿಲುಕಿದೆ.ಮಾಲೀಕ ಮಂಜುನಾಥ್ ಹಾಗೂ ಈತನ ಸಹೋದರನ ಮೇಲೆ ಮೇಘರಾಜ್ ರವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಂಜುನಾಥ್ ರವರಿಗೆ ಸೇರಿದ ಮನೆಗೆ ಮೇಘರಾಜ್ ಸುಮಾರು 6 ತಿಂಗಳ ಹಿಂದೆ ಬಾಡಿಗೆ ಪಡೆದು ವಾಸಕ್ಕೆ ಬಂದಿದ್ದಾರೆ. ಬಾಡಿಗೆ ವಿಚಾರದಲ್ಲಿ ಮೇಘರಾಜ್ ಹಾಗೂ ಮಂಜುನಾಥ್ ನಡುವೆ ವಿವಾದ ಶುರುವಾಗಿದೆ.ತಾವು ನೀಡಿದ್ದ ಮುಂಗಡ ಹಣ ವಾಪಸ್ ಪಡೆದು ಮನೆ ಖಾಲಿ ಮಾಡಲು ಮೇಘರಾಜ್ ನಿರ್ಧರಿಸಿದ್ದಾರೆ. ಇದಕ್ಕೆ ಒಪ್ಪದ ಮಂಜುನಾಥ್ ಮನೆಗೆ ಬೀಗ ಜಡಿದು ದರ್ಪ ತೋರಿಸಿದ್ದಾರೆ.ಈ ಕುರಿತಂತೆ ಮೇಘರಾಜ್ ಮೇಟಗಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಮಂಜುನಾಥ್ ರವರನ್ನ ಕರೆಸಿ ಪೊಲೀಸರು ಬುದ್ದಿವಾದ ಹೇಳಿ ಬೀಗ ತೆಗೆಸಿದ್ದಾರೆ.ಹೀಗಿದ್ದರೂ ಆಗಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಕಿರುಕುಳ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮೇಘರಾಜ್ ರವರು ಕುಟುಂಬ ಸಮೇತ ತಮ್ಮ ಸ್ವಂತ ಊರಾದ ಕಬ್ಬಳಿಗೆರೆಗೆ ತೆರಳಿದ್ದಾರೆ.ಹಿಂದಿರುಗಿ ಬರುವಷ್ಟರಲ್ಲಿ ಮಂಜುನಾಥ್ ಮತ್ತೆ ಮನೆಗೆ ಬೀಗ ಹಾಕಿದ್ದಾರೆ.ಕಿಟಕಿ ಮೂಲಕ ಮನೆ ಒಳಗೆ ಪರಿಶೀಲಸಿದಾಗ ಪೀಠೋಪಕರಣಗಳ ಸಮೇತ ನಗದು ಚಿನ್ನಾಭರಣ ನಾಪತ್ತೆಯಾಗಿದೆ.ಸುಮಾರು 85 ಗ್ರಾಂ ಚಿನ್ನಾಭರಣ,1.20 ಲಕ್ಷ ನಗದು,ಫ್ರಿಡ್ಜ್,ವಾಶಿಂಗ್ ಮೆಷಿನ್,ಹರ್ಬಲ್ ಪ್ರಾಡಕ್ಟ್ಸ್ ಗಳು ನಾಪತ್ತೆಯಾಗಿದೆ.ನಕಲಿ ಕೀ ಬಳಸಿ ಮಾಲೀಕ ಮಂಜುನಾಥ್ ತಮ್ಮ ಪದಾರ್ಥಗಳನ್ನ ದೋಚಿದ್ದಾರೆಂದು ಮೇಘರಾಜ್ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *