ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ಮೈಸೂರು,ಜೂ19,Tv10 ಕನ್ನಡ

ನಕಲಿ ಕೀ ಬಳಸಿ ಬಾಡಿಗೆ ನೀಡಿದ್ದ ಮನೆಯನ್ನ ಮಾಲೀಕನೇ ದೋಚಿದ ಘಟನೆ ಮೈಸೂರಿನ ಲೋಕನಾಯಕನಗರದಲ್ಲಿ ನಡೆದಿದೆ.ಸರ್ವಸ್ವವನ್ನೂ ಕಳೆದುಕೊಂಡ ಬಾಡಿಗೆದಾರ ಇದೀಗ ಅತಂತ್ರವಾಗಿದ್ದಾರೆ.ಫುಡ್ ಪ್ರಾಡಕ್ಟ್ಸ್ ಡಿಸ್ಟ್ರಿಬ್ಯೂಟರ್ ಆಗಿರುವ ಮೇಘರಾಜ್ ರವರ ಕುಟುಂಬ ಇದೀಗ ಅತಂತ್ರಕ್ಕೆ ಸಿಲುಕಿದೆ.ಮಾಲೀಕ ಮಂಜುನಾಥ್ ಹಾಗೂ ಈತನ ಸಹೋದರನ ಮೇಲೆ ಮೇಘರಾಜ್ ರವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಂಜುನಾಥ್ ರವರಿಗೆ ಸೇರಿದ ಮನೆಗೆ ಮೇಘರಾಜ್ ಸುಮಾರು 6 ತಿಂಗಳ ಹಿಂದೆ ಬಾಡಿಗೆ ಪಡೆದು ವಾಸಕ್ಕೆ ಬಂದಿದ್ದಾರೆ. ಬಾಡಿಗೆ ವಿಚಾರದಲ್ಲಿ ಮೇಘರಾಜ್ ಹಾಗೂ ಮಂಜುನಾಥ್ ನಡುವೆ ವಿವಾದ ಶುರುವಾಗಿದೆ.ತಾವು ನೀಡಿದ್ದ ಮುಂಗಡ ಹಣ ವಾಪಸ್ ಪಡೆದು ಮನೆ ಖಾಲಿ ಮಾಡಲು ಮೇಘರಾಜ್ ನಿರ್ಧರಿಸಿದ್ದಾರೆ. ಇದಕ್ಕೆ ಒಪ್ಪದ ಮಂಜುನಾಥ್ ಮನೆಗೆ ಬೀಗ ಜಡಿದು ದರ್ಪ ತೋರಿಸಿದ್ದಾರೆ.ಈ ಕುರಿತಂತೆ ಮೇಘರಾಜ್ ಮೇಟಗಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಮಂಜುನಾಥ್ ರವರನ್ನ ಕರೆಸಿ ಪೊಲೀಸರು ಬುದ್ದಿವಾದ ಹೇಳಿ ಬೀಗ ತೆಗೆಸಿದ್ದಾರೆ.ಹೀಗಿದ್ದರೂ ಆಗಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಕಿರುಕುಳ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮೇಘರಾಜ್ ರವರು ಕುಟುಂಬ ಸಮೇತ ತಮ್ಮ ಸ್ವಂತ ಊರಾದ ಕಬ್ಬಳಿಗೆರೆಗೆ ತೆರಳಿದ್ದಾರೆ.ಹಿಂದಿರುಗಿ ಬರುವಷ್ಟರಲ್ಲಿ ಮಂಜುನಾಥ್ ಮತ್ತೆ ಮನೆಗೆ ಬೀಗ ಹಾಕಿದ್ದಾರೆ.ಕಿಟಕಿ ಮೂಲಕ ಮನೆ ಒಳಗೆ ಪರಿಶೀಲಸಿದಾಗ ಪೀಠೋಪಕರಣಗಳ ಸಮೇತ ನಗದು ಚಿನ್ನಾಭರಣ ನಾಪತ್ತೆಯಾಗಿದೆ.ಸುಮಾರು 85 ಗ್ರಾಂ ಚಿನ್ನಾಭರಣ,1.20 ಲಕ್ಷ ನಗದು,ಫ್ರಿಡ್ಜ್,ವಾಶಿಂಗ್ ಮೆಷಿನ್,ಹರ್ಬಲ್ ಪ್ರಾಡಕ್ಟ್ಸ್ ಗಳು ನಾಪತ್ತೆಯಾಗಿದೆ.ನಕಲಿ ಕೀ ಬಳಸಿ ಮಾಲೀಕ ಮಂಜುನಾಥ್ ತಮ್ಮ ಪದಾರ್ಥಗಳನ್ನ ದೋಚಿದ್ದಾರೆಂದು ಮೇಘರಾಜ್ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *