ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ಮೈಸೂರು,ಜೂ19,Tv10 ಕನ್ನಡ

ನಕಲಿ ಕೀ ಬಳಸಿ ಬಾಡಿಗೆ ನೀಡಿದ್ದ ಮನೆಯನ್ನ ಮಾಲೀಕನೇ ದೋಚಿದ ಘಟನೆ ಮೈಸೂರಿನ ಲೋಕನಾಯಕನಗರದಲ್ಲಿ ನಡೆದಿದೆ.ಸರ್ವಸ್ವವನ್ನೂ ಕಳೆದುಕೊಂಡ ಬಾಡಿಗೆದಾರ ಇದೀಗ ಅತಂತ್ರವಾಗಿದ್ದಾರೆ.ಫುಡ್ ಪ್ರಾಡಕ್ಟ್ಸ್ ಡಿಸ್ಟ್ರಿಬ್ಯೂಟರ್ ಆಗಿರುವ ಮೇಘರಾಜ್ ರವರ ಕುಟುಂಬ ಇದೀಗ ಅತಂತ್ರಕ್ಕೆ ಸಿಲುಕಿದೆ.ಮಾಲೀಕ ಮಂಜುನಾಥ್ ಹಾಗೂ ಈತನ ಸಹೋದರನ ಮೇಲೆ ಮೇಘರಾಜ್ ರವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಂಜುನಾಥ್ ರವರಿಗೆ ಸೇರಿದ ಮನೆಗೆ ಮೇಘರಾಜ್ ಸುಮಾರು 6 ತಿಂಗಳ ಹಿಂದೆ ಬಾಡಿಗೆ ಪಡೆದು ವಾಸಕ್ಕೆ ಬಂದಿದ್ದಾರೆ. ಬಾಡಿಗೆ ವಿಚಾರದಲ್ಲಿ ಮೇಘರಾಜ್ ಹಾಗೂ ಮಂಜುನಾಥ್ ನಡುವೆ ವಿವಾದ ಶುರುವಾಗಿದೆ.ತಾವು ನೀಡಿದ್ದ ಮುಂಗಡ ಹಣ ವಾಪಸ್ ಪಡೆದು ಮನೆ ಖಾಲಿ ಮಾಡಲು ಮೇಘರಾಜ್ ನಿರ್ಧರಿಸಿದ್ದಾರೆ. ಇದಕ್ಕೆ ಒಪ್ಪದ ಮಂಜುನಾಥ್ ಮನೆಗೆ ಬೀಗ ಜಡಿದು ದರ್ಪ ತೋರಿಸಿದ್ದಾರೆ.ಈ ಕುರಿತಂತೆ ಮೇಘರಾಜ್ ಮೇಟಗಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಮಂಜುನಾಥ್ ರವರನ್ನ ಕರೆಸಿ ಪೊಲೀಸರು ಬುದ್ದಿವಾದ ಹೇಳಿ ಬೀಗ ತೆಗೆಸಿದ್ದಾರೆ.ಹೀಗಿದ್ದರೂ ಆಗಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಕಿರುಕುಳ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮೇಘರಾಜ್ ರವರು ಕುಟುಂಬ ಸಮೇತ ತಮ್ಮ ಸ್ವಂತ ಊರಾದ ಕಬ್ಬಳಿಗೆರೆಗೆ ತೆರಳಿದ್ದಾರೆ.ಹಿಂದಿರುಗಿ ಬರುವಷ್ಟರಲ್ಲಿ ಮಂಜುನಾಥ್ ಮತ್ತೆ ಮನೆಗೆ ಬೀಗ ಹಾಕಿದ್ದಾರೆ.ಕಿಟಕಿ ಮೂಲಕ ಮನೆ ಒಳಗೆ ಪರಿಶೀಲಸಿದಾಗ ಪೀಠೋಪಕರಣಗಳ ಸಮೇತ ನಗದು ಚಿನ್ನಾಭರಣ ನಾಪತ್ತೆಯಾಗಿದೆ.ಸುಮಾರು 85 ಗ್ರಾಂ ಚಿನ್ನಾಭರಣ,1.20 ಲಕ್ಷ ನಗದು,ಫ್ರಿಡ್ಜ್,ವಾಶಿಂಗ್ ಮೆಷಿನ್,ಹರ್ಬಲ್ ಪ್ರಾಡಕ್ಟ್ಸ್ ಗಳು ನಾಪತ್ತೆಯಾಗಿದೆ.ನಕಲಿ ಕೀ ಬಳಸಿ ಮಾಲೀಕ ಮಂಜುನಾಥ್ ತಮ್ಮ ಪದಾರ್ಥಗಳನ್ನ ದೋಚಿದ್ದಾರೆಂದು ಮೇಘರಾಜ್ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *