ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ನಕಲಿ ಕೀ ಬಳಸಿ ಮನೆ ದೋಚಿದ ಮಾಲೀಕ…ಆತಂತ್ರವಾದ ಕುಟುಂಬ…

ಮೈಸೂರು,ಜೂ19,Tv10 ಕನ್ನಡ

ನಕಲಿ ಕೀ ಬಳಸಿ ಬಾಡಿಗೆ ನೀಡಿದ್ದ ಮನೆಯನ್ನ ಮಾಲೀಕನೇ ದೋಚಿದ ಘಟನೆ ಮೈಸೂರಿನ ಲೋಕನಾಯಕನಗರದಲ್ಲಿ ನಡೆದಿದೆ.ಸರ್ವಸ್ವವನ್ನೂ ಕಳೆದುಕೊಂಡ ಬಾಡಿಗೆದಾರ ಇದೀಗ ಅತಂತ್ರವಾಗಿದ್ದಾರೆ.ಫುಡ್ ಪ್ರಾಡಕ್ಟ್ಸ್ ಡಿಸ್ಟ್ರಿಬ್ಯೂಟರ್ ಆಗಿರುವ ಮೇಘರಾಜ್ ರವರ ಕುಟುಂಬ ಇದೀಗ ಅತಂತ್ರಕ್ಕೆ ಸಿಲುಕಿದೆ.ಮಾಲೀಕ ಮಂಜುನಾಥ್ ಹಾಗೂ ಈತನ ಸಹೋದರನ ಮೇಲೆ ಮೇಘರಾಜ್ ರವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಂಜುನಾಥ್ ರವರಿಗೆ ಸೇರಿದ ಮನೆಗೆ ಮೇಘರಾಜ್ ಸುಮಾರು 6 ತಿಂಗಳ ಹಿಂದೆ ಬಾಡಿಗೆ ಪಡೆದು ವಾಸಕ್ಕೆ ಬಂದಿದ್ದಾರೆ. ಬಾಡಿಗೆ ವಿಚಾರದಲ್ಲಿ ಮೇಘರಾಜ್ ಹಾಗೂ ಮಂಜುನಾಥ್ ನಡುವೆ ವಿವಾದ ಶುರುವಾಗಿದೆ.ತಾವು ನೀಡಿದ್ದ ಮುಂಗಡ ಹಣ ವಾಪಸ್ ಪಡೆದು ಮನೆ ಖಾಲಿ ಮಾಡಲು ಮೇಘರಾಜ್ ನಿರ್ಧರಿಸಿದ್ದಾರೆ. ಇದಕ್ಕೆ ಒಪ್ಪದ ಮಂಜುನಾಥ್ ಮನೆಗೆ ಬೀಗ ಜಡಿದು ದರ್ಪ ತೋರಿಸಿದ್ದಾರೆ.ಈ ಕುರಿತಂತೆ ಮೇಘರಾಜ್ ಮೇಟಗಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಮಂಜುನಾಥ್ ರವರನ್ನ ಕರೆಸಿ ಪೊಲೀಸರು ಬುದ್ದಿವಾದ ಹೇಳಿ ಬೀಗ ತೆಗೆಸಿದ್ದಾರೆ.ಹೀಗಿದ್ದರೂ ಆಗಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಕಿರುಕುಳ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮೇಘರಾಜ್ ರವರು ಕುಟುಂಬ ಸಮೇತ ತಮ್ಮ ಸ್ವಂತ ಊರಾದ ಕಬ್ಬಳಿಗೆರೆಗೆ ತೆರಳಿದ್ದಾರೆ.ಹಿಂದಿರುಗಿ ಬರುವಷ್ಟರಲ್ಲಿ ಮಂಜುನಾಥ್ ಮತ್ತೆ ಮನೆಗೆ ಬೀಗ ಹಾಕಿದ್ದಾರೆ.ಕಿಟಕಿ ಮೂಲಕ ಮನೆ ಒಳಗೆ ಪರಿಶೀಲಸಿದಾಗ ಪೀಠೋಪಕರಣಗಳ ಸಮೇತ ನಗದು ಚಿನ್ನಾಭರಣ ನಾಪತ್ತೆಯಾಗಿದೆ.ಸುಮಾರು 85 ಗ್ರಾಂ ಚಿನ್ನಾಭರಣ,1.20 ಲಕ್ಷ ನಗದು,ಫ್ರಿಡ್ಜ್,ವಾಶಿಂಗ್ ಮೆಷಿನ್,ಹರ್ಬಲ್ ಪ್ರಾಡಕ್ಟ್ಸ್ ಗಳು ನಾಪತ್ತೆಯಾಗಿದೆ.ನಕಲಿ ಕೀ ಬಳಸಿ ಮಾಲೀಕ ಮಂಜುನಾಥ್ ತಮ್ಮ ಪದಾರ್ಥಗಳನ್ನ ದೋಚಿದ್ದಾರೆಂದು ಮೇಘರಾಜ್ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *