ಪೊಲೀಸ್ ಸ್ಟೇಷನ್ ನಲ್ಲಿ ಮಗು ಬಿಟ್ಟು ತಾಯಿ ಎಸ್ಕೇಪ್…ಯಾಕೆ ಗೊತ್ತಾ…?

ಪೊಲೀಸ್ ಸ್ಟೇಷನ್ ನಲ್ಲಿ ಮಗು ಬಿಟ್ಟು ತಾಯಿ ಎಸ್ಕೇಪ್…ಯಾಕೆ ಗೊತ್ತಾ…?

ಮೈಸೂರು,ಜೂ20,Tv10 ಕನ್ನಡ

ಪೊಲೀಸ್ ಠಾಣೆಯಲ್ಲಿ ಹೆತ್ತ ಮಗುವನ್ನ ಬಿಟ್ಟ ತಾಯಿ ಎಸ್ಕೇಪ್ ಆದ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪೊಲೀಸ್ ಠಾಣೆಯಲ್ಲಿ ಮಗುವನ್ನ ಬಿಟ್ಟಿದ್ದೇನೆ ತಗೋ ಎಂದು ಪತಿಗೆ ಮೊಬೈಲ್ ನಲ್ಲಿ ತಿಳಿಸಿ ನಾಪತ್ತೆಯಾಗಿದ್ದಾಳೆ.ಪತ್ನಿ ನಾಪತ್ತೆಯಾದ ಹಿನ್ನಲೆ ಪತಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೊಳ್ಳೇಗಾಲದ ನಿವಾಸಿ ಶಶಿಕುಮಾರ್ ರವರಿಗೆ ಇಂತಹ ಕಹಿ ಅನುಭವ ಆಗಿದೆ.ಪತ್ನಿ ಸಿಂಧೂ ಕೈಕೊಟ್ಟು ಎಸ್ಕೇಪ್ ಆಗಿದ್ದಾಳೆ.ಫಾಸ್ಟ್ ಫುಡ್ ವ್ಯವಹಾರ ಮಾಡುವ ಶಶಿಕುಮಾರ್ ಮೂರು ವರ್ಷಗಳ ಹಿಂದೆ ಬೆಂಗಳೂರಿನ ಸಿಂಧು ಎಂಬಾಕೆಯನ್ನ ವಿವಾಹವಾಗಿದ್ದರು.ಇವರಿಗೆ ಅದ್ವಿಕ್ ಎಂಬ ಮಗು ಇದೆ.ಜೂನ್ 15 ರಂದು ದಂಪತಿ ಮಗು ಸಮೇತ ಮೈಸೂರಿಗೆ ಬಂದಿದ್ದರು.ಈ ವೇಳೆ ಸ್ನೇಹಿತೆಯ ಜೊತೆ ಹೊರಟು ಮರುದಿನ ಪತಿಗೆ ಫೋನ್ ಮಾಡಿ ಚಾಮುಂಡಿಬೆಟ್ಟಕ್ಕೆ ಹೋಗೋಣ ಎಂದು ಕರೆದಿದ್ದಳು.ಪತ್ನಿಯ ಕರೆಗೆ ಸ್ಪಂದಿಸಿ ಚಾಮುಂಡಿಬೆಟ್ಟದ ಪಾದದ ಬಳಿಗೆ ಬಂದಾಗ ಸಿಂಧು ಕಾಣಿಸಲಿಲ್ಲ.ಪತ್ನಿಗಾಗಿ ಹುಡುಕಾಡುತ್ತಿದ್ದಾಗ ಮೊಬೈಲ್ ನಲ್ಲಿ ಸಂಪರ್ಕಿಸಿದ ಸಿಂಧು ಮಗುವನ್ನ ಕುರುಬಾರಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಟ್ಟಿದ್ದೇನೆ ತಗೋ ಎಂದು ತಿಳಿಸಿ ಸ್ವಿಚ್ ಆಫ್ ಮಾಡಿದ್ದಾಳೆ.ನಜರಬಾದ್ ಠಾಣೆಗೆ ಆಗಮಿಸಿದ ಶಶಿಕುಮಾರ್ ರವರು ಮಗ ಅದ್ವಿಕ್ ನನ್ನ ತಮ್ಮ ವಶಕ್ಕೆ ಪಡೆದಿದ್ದಾರೆ.

ಸಿಂಧು ಬೆಂಗಳೂರಿನ ಯುವಕನ ಜೊತೆ ಸ್ನೇಹ ಬೆಳೆಸಿಕೊಂಡಿದ್ದು ಆತನ ಜೊತೆ ಹೋಗಿರಬಹುದೆಂದು ಶಂಕಿಸಲಾಗಿದೆ.ಈ ಬಗ್ಗೆ ಶಶಿಕುಮಾರ್ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *