ಪೊಲೀಸ್ ಸ್ಟೇಷನ್ ನಲ್ಲಿ ಮಗು ಬಿಟ್ಟು ತಾಯಿ ಎಸ್ಕೇಪ್…ಯಾಕೆ ಗೊತ್ತಾ…?

ಪೊಲೀಸ್ ಸ್ಟೇಷನ್ ನಲ್ಲಿ ಮಗು ಬಿಟ್ಟು ತಾಯಿ ಎಸ್ಕೇಪ್…ಯಾಕೆ ಗೊತ್ತಾ…?

ಮೈಸೂರು,ಜೂ20,Tv10 ಕನ್ನಡ

ಪೊಲೀಸ್ ಠಾಣೆಯಲ್ಲಿ ಹೆತ್ತ ಮಗುವನ್ನ ಬಿಟ್ಟ ತಾಯಿ ಎಸ್ಕೇಪ್ ಆದ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪೊಲೀಸ್ ಠಾಣೆಯಲ್ಲಿ ಮಗುವನ್ನ ಬಿಟ್ಟಿದ್ದೇನೆ ತಗೋ ಎಂದು ಪತಿಗೆ ಮೊಬೈಲ್ ನಲ್ಲಿ ತಿಳಿಸಿ ನಾಪತ್ತೆಯಾಗಿದ್ದಾಳೆ.ಪತ್ನಿ ನಾಪತ್ತೆಯಾದ ಹಿನ್ನಲೆ ಪತಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೊಳ್ಳೇಗಾಲದ ನಿವಾಸಿ ಶಶಿಕುಮಾರ್ ರವರಿಗೆ ಇಂತಹ ಕಹಿ ಅನುಭವ ಆಗಿದೆ.ಪತ್ನಿ ಸಿಂಧೂ ಕೈಕೊಟ್ಟು ಎಸ್ಕೇಪ್ ಆಗಿದ್ದಾಳೆ.ಫಾಸ್ಟ್ ಫುಡ್ ವ್ಯವಹಾರ ಮಾಡುವ ಶಶಿಕುಮಾರ್ ಮೂರು ವರ್ಷಗಳ ಹಿಂದೆ ಬೆಂಗಳೂರಿನ ಸಿಂಧು ಎಂಬಾಕೆಯನ್ನ ವಿವಾಹವಾಗಿದ್ದರು.ಇವರಿಗೆ ಅದ್ವಿಕ್ ಎಂಬ ಮಗು ಇದೆ.ಜೂನ್ 15 ರಂದು ದಂಪತಿ ಮಗು ಸಮೇತ ಮೈಸೂರಿಗೆ ಬಂದಿದ್ದರು.ಈ ವೇಳೆ ಸ್ನೇಹಿತೆಯ ಜೊತೆ ಹೊರಟು ಮರುದಿನ ಪತಿಗೆ ಫೋನ್ ಮಾಡಿ ಚಾಮುಂಡಿಬೆಟ್ಟಕ್ಕೆ ಹೋಗೋಣ ಎಂದು ಕರೆದಿದ್ದಳು.ಪತ್ನಿಯ ಕರೆಗೆ ಸ್ಪಂದಿಸಿ ಚಾಮುಂಡಿಬೆಟ್ಟದ ಪಾದದ ಬಳಿಗೆ ಬಂದಾಗ ಸಿಂಧು ಕಾಣಿಸಲಿಲ್ಲ.ಪತ್ನಿಗಾಗಿ ಹುಡುಕಾಡುತ್ತಿದ್ದಾಗ ಮೊಬೈಲ್ ನಲ್ಲಿ ಸಂಪರ್ಕಿಸಿದ ಸಿಂಧು ಮಗುವನ್ನ ಕುರುಬಾರಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಟ್ಟಿದ್ದೇನೆ ತಗೋ ಎಂದು ತಿಳಿಸಿ ಸ್ವಿಚ್ ಆಫ್ ಮಾಡಿದ್ದಾಳೆ.ನಜರಬಾದ್ ಠಾಣೆಗೆ ಆಗಮಿಸಿದ ಶಶಿಕುಮಾರ್ ರವರು ಮಗ ಅದ್ವಿಕ್ ನನ್ನ ತಮ್ಮ ವಶಕ್ಕೆ ಪಡೆದಿದ್ದಾರೆ.

ಸಿಂಧು ಬೆಂಗಳೂರಿನ ಯುವಕನ ಜೊತೆ ಸ್ನೇಹ ಬೆಳೆಸಿಕೊಂಡಿದ್ದು ಆತನ ಜೊತೆ ಹೋಗಿರಬಹುದೆಂದು ಶಂಕಿಸಲಾಗಿದೆ.ಈ ಬಗ್ಗೆ ಶಶಿಕುಮಾರ್ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *