ಪೊಲೀಸ್ ಸ್ಟೇಷನ್ ನಲ್ಲಿ ಮಗು ಬಿಟ್ಟು ತಾಯಿ ಎಸ್ಕೇಪ್…ಯಾಕೆ ಗೊತ್ತಾ…?

ಪೊಲೀಸ್ ಸ್ಟೇಷನ್ ನಲ್ಲಿ ಮಗು ಬಿಟ್ಟು ತಾಯಿ ಎಸ್ಕೇಪ್…ಯಾಕೆ ಗೊತ್ತಾ…?

ಮೈಸೂರು,ಜೂ20,Tv10 ಕನ್ನಡ

ಪೊಲೀಸ್ ಠಾಣೆಯಲ್ಲಿ ಹೆತ್ತ ಮಗುವನ್ನ ಬಿಟ್ಟ ತಾಯಿ ಎಸ್ಕೇಪ್ ಆದ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪೊಲೀಸ್ ಠಾಣೆಯಲ್ಲಿ ಮಗುವನ್ನ ಬಿಟ್ಟಿದ್ದೇನೆ ತಗೋ ಎಂದು ಪತಿಗೆ ಮೊಬೈಲ್ ನಲ್ಲಿ ತಿಳಿಸಿ ನಾಪತ್ತೆಯಾಗಿದ್ದಾಳೆ.ಪತ್ನಿ ನಾಪತ್ತೆಯಾದ ಹಿನ್ನಲೆ ಪತಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೊಳ್ಳೇಗಾಲದ ನಿವಾಸಿ ಶಶಿಕುಮಾರ್ ರವರಿಗೆ ಇಂತಹ ಕಹಿ ಅನುಭವ ಆಗಿದೆ.ಪತ್ನಿ ಸಿಂಧೂ ಕೈಕೊಟ್ಟು ಎಸ್ಕೇಪ್ ಆಗಿದ್ದಾಳೆ.ಫಾಸ್ಟ್ ಫುಡ್ ವ್ಯವಹಾರ ಮಾಡುವ ಶಶಿಕುಮಾರ್ ಮೂರು ವರ್ಷಗಳ ಹಿಂದೆ ಬೆಂಗಳೂರಿನ ಸಿಂಧು ಎಂಬಾಕೆಯನ್ನ ವಿವಾಹವಾಗಿದ್ದರು.ಇವರಿಗೆ ಅದ್ವಿಕ್ ಎಂಬ ಮಗು ಇದೆ.ಜೂನ್ 15 ರಂದು ದಂಪತಿ ಮಗು ಸಮೇತ ಮೈಸೂರಿಗೆ ಬಂದಿದ್ದರು.ಈ ವೇಳೆ ಸ್ನೇಹಿತೆಯ ಜೊತೆ ಹೊರಟು ಮರುದಿನ ಪತಿಗೆ ಫೋನ್ ಮಾಡಿ ಚಾಮುಂಡಿಬೆಟ್ಟಕ್ಕೆ ಹೋಗೋಣ ಎಂದು ಕರೆದಿದ್ದಳು.ಪತ್ನಿಯ ಕರೆಗೆ ಸ್ಪಂದಿಸಿ ಚಾಮುಂಡಿಬೆಟ್ಟದ ಪಾದದ ಬಳಿಗೆ ಬಂದಾಗ ಸಿಂಧು ಕಾಣಿಸಲಿಲ್ಲ.ಪತ್ನಿಗಾಗಿ ಹುಡುಕಾಡುತ್ತಿದ್ದಾಗ ಮೊಬೈಲ್ ನಲ್ಲಿ ಸಂಪರ್ಕಿಸಿದ ಸಿಂಧು ಮಗುವನ್ನ ಕುರುಬಾರಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಟ್ಟಿದ್ದೇನೆ ತಗೋ ಎಂದು ತಿಳಿಸಿ ಸ್ವಿಚ್ ಆಫ್ ಮಾಡಿದ್ದಾಳೆ.ನಜರಬಾದ್ ಠಾಣೆಗೆ ಆಗಮಿಸಿದ ಶಶಿಕುಮಾರ್ ರವರು ಮಗ ಅದ್ವಿಕ್ ನನ್ನ ತಮ್ಮ ವಶಕ್ಕೆ ಪಡೆದಿದ್ದಾರೆ.

ಸಿಂಧು ಬೆಂಗಳೂರಿನ ಯುವಕನ ಜೊತೆ ಸ್ನೇಹ ಬೆಳೆಸಿಕೊಂಡಿದ್ದು ಆತನ ಜೊತೆ ಹೋಗಿರಬಹುದೆಂದು ಶಂಕಿಸಲಾಗಿದೆ.ಈ ಬಗ್ಗೆ ಶಶಿಕುಮಾರ್ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *