ನಾಲ್ಕನೇ ಮಹಡಿಯಿಂದ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆ…

ನಾಲ್ಕನೇ ಮಹಡಿಯಿಂದ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆ…

ಪೋಷಕರ ಮುಂದೆಯೇ ಘಟನೆ…ಫರೂಕಿಯಾ ಡೆಂಟಲ್ ಕಾಲೇಜಿನಲ್ಲಿ ಘಟನೆ…
ಮೈಸೂರು,ಜೂ22,Tv10 ಕನ್ನಡ

ಟೆಸ್ಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಾಳೆಂದು ಕಾಲೇಜು ಮುಖ್ಯಸ್ಥರು ಪೋಷಕರನ್ನ ಕರೆಸಿ ಬುದ್ದಿವಾದ ಹೇಳಿದ ಹಿನ್ನಲೆ ವಿಧ್ಯಾರ್ಥಿನಿ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಫಾರೂಕಿಯಾ ಡೆಂಟಲ್ ಕಾಲೇಜಿನಲ್ಲಿ ನಡೆದಿದೆ.ಪೋಷಕರ ಮುಂದೆಯೇ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಲಷ್ಕರ್ ಮೊಹಲ್ಲಾ ನಿವಾಸಿ ಮೆಹಕ್(19) ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ.

ಫಾರೂಕಿಯ ಡೆಂಟಲ್ ಕಾಲೇಜಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಕೋರ್ಸ್ ಆಯ್ದುಕೊಂಡಿದ್ದ ಮೆಹಕ್ ಇತ್ತೀಚೆಗೆ ನಡೆದ ಟೆಸ್ಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಳೆನ್ನಲಾಗಿದೆ.ಈ ಹಿನ್ನಲೆ ಕಾಲೇಜು ಮುಖ್ಯಸ್ಥರು ಮೆಹಕ್ ಳ ತಾಯಿ ಹಾಗೂ ಸಹೋದರನನ್ನ ಕರೆಸಿ ಸರಿಯಾಗಿ ಓದಿನ ಕಡೆ ಗಮನ ಹರಿಸುವಂತೆ ಬುದ್ದಿವಾದ ಹೇಳಿದ್ದಾರೆ.ತಾನು ಸರಿಯಾಗಿ ಓದಿದ್ದರೂ ದೂರು ನೀಡಿದ್ದಾರೆಂದು ಬೇಸತ್ತ ಮೆಹಕ್ ಪೋಷಕರು ಸ್ಥಳದಲ್ಲಿ ಇದ್ದರೂ ನಾಲ್ಕನೇ ಮಹಡಿಗೆ ತೆರಳಿ ಕೆಳಗೆ ಹಾರಿದ್ದಾಳೆ.ತೀವ್ರ ಗಾಯಗೊಂಡ ಮೆಹಕ್ ಳನ್ನ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೆಹಕ್ ಮೃತಪಟ್ಟಿದ್ದಾಳೆ.ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *