ನಾಲ್ಕನೇ ಮಹಡಿಯಿಂದ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆ…

ನಾಲ್ಕನೇ ಮಹಡಿಯಿಂದ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆ…

ಪೋಷಕರ ಮುಂದೆಯೇ ಘಟನೆ…ಫರೂಕಿಯಾ ಡೆಂಟಲ್ ಕಾಲೇಜಿನಲ್ಲಿ ಘಟನೆ…
ಮೈಸೂರು,ಜೂ22,Tv10 ಕನ್ನಡ

ಟೆಸ್ಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಾಳೆಂದು ಕಾಲೇಜು ಮುಖ್ಯಸ್ಥರು ಪೋಷಕರನ್ನ ಕರೆಸಿ ಬುದ್ದಿವಾದ ಹೇಳಿದ ಹಿನ್ನಲೆ ವಿಧ್ಯಾರ್ಥಿನಿ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಫಾರೂಕಿಯಾ ಡೆಂಟಲ್ ಕಾಲೇಜಿನಲ್ಲಿ ನಡೆದಿದೆ.ಪೋಷಕರ ಮುಂದೆಯೇ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಲಷ್ಕರ್ ಮೊಹಲ್ಲಾ ನಿವಾಸಿ ಮೆಹಕ್(19) ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ.

ಫಾರೂಕಿಯ ಡೆಂಟಲ್ ಕಾಲೇಜಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಕೋರ್ಸ್ ಆಯ್ದುಕೊಂಡಿದ್ದ ಮೆಹಕ್ ಇತ್ತೀಚೆಗೆ ನಡೆದ ಟೆಸ್ಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಳೆನ್ನಲಾಗಿದೆ.ಈ ಹಿನ್ನಲೆ ಕಾಲೇಜು ಮುಖ್ಯಸ್ಥರು ಮೆಹಕ್ ಳ ತಾಯಿ ಹಾಗೂ ಸಹೋದರನನ್ನ ಕರೆಸಿ ಸರಿಯಾಗಿ ಓದಿನ ಕಡೆ ಗಮನ ಹರಿಸುವಂತೆ ಬುದ್ದಿವಾದ ಹೇಳಿದ್ದಾರೆ.ತಾನು ಸರಿಯಾಗಿ ಓದಿದ್ದರೂ ದೂರು ನೀಡಿದ್ದಾರೆಂದು ಬೇಸತ್ತ ಮೆಹಕ್ ಪೋಷಕರು ಸ್ಥಳದಲ್ಲಿ ಇದ್ದರೂ ನಾಲ್ಕನೇ ಮಹಡಿಗೆ ತೆರಳಿ ಕೆಳಗೆ ಹಾರಿದ್ದಾಳೆ.ತೀವ್ರ ಗಾಯಗೊಂಡ ಮೆಹಕ್ ಳನ್ನ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೆಹಕ್ ಮೃತಪಟ್ಟಿದ್ದಾಳೆ.ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *