ಜಿಲ್ಲಾಡಳಿತ ಕಾರ್ಯಾಚರಣೆ…ಕೋಟ್ಯಾಂತರ ಮೌಲ್ಯದ ಜಮೀನು ಸರ್ಕಾರದ ವಶಕ್ಕೆ…ಭೂಗಳ್ಳರಿಗೆ ಶಾಕ್…

ಜಿಲ್ಲಾಡಳಿತ ಕಾರ್ಯಾಚರಣೆ…ಕೋಟ್ಯಾಂತರ ಮೌಲ್ಯದ ಜಮೀನು ಸರ್ಕಾರದ ವಶಕ್ಕೆ…ಭೂಗಳ್ಳರಿಗೆ ಶಾಕ್…

  • Mysore
  • June 22, 2024
  • No Comment
  • 921

ಮೈಸೂರು,ಜೂ22,Tv10 ಕನ್ನಡ

ಜಿಲ್ಲಾಡಳಿತ ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಸುಮಾರು 15 ಕೋಟಿ ಬೆಲೆಬಾಳುವ ಜಮೀನು ಭೂಗಳ್ಳರಿಂದ ರಕ್ಷಿಸಲಾಗಿದೆ.ಒತ್ತುವರಿ ಮಾಡಿಕೊಂಡು ದಾಖಲೆಯನ್ನ ಪರಿಶೀಲಿಸಿದ ಜಿಲ್ಲಾಡಳಿತ ಭೂಗಳ್ಳರಿಗೆ ಶಾಕ್ ನೀಡಿದೆ.ಒತ್ತುವರಿ ಮಾಡಿಕೊಂಡಿದ್ದ 10.28 ಎಕ್ರೆ ಜಮೀನು ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಸಿಎಂ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆ ವರುಣಾ ಹೋಬಳಿ ಹಾರೋಹಳ್ಳಿ ಗ್ರಾಮ ಸರ್ವೆ ನಂ.274 ರಲ್ಲಿರುವ 10.28 ಎಕ್ರೆ ಜಮೀನು ಹುಲ್ಲುಬನ್ನಿಯಾಗಿದೆ.ಸದರಿ ಜಮೀನನ್ನ ಕರಿಗೌಡ,ನಾರಾಯಣಗೌಡ,ಚಿಕ್ಕಲಿಂಗಯ್ಯ,ತಿಮ್ಮೇಗೌಡ ಎಂಬುವರು ಒತ್ತುವರಿ ಮಾಡಿಕೊಂಡಿದ್ದರು. ಭೂಗಳ್ಳರಿಗೆ ಜಿಲ್ಲಾಡಳಿತ ಬಿಸಿ ಮುಟ್ಟಿಸಿದೆ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರ ನಿರ್ದೇಶನದ ಮೇರೆಗೆ ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿಗಳಾದ ಕೆ.ಆರ್.ರಕ್ಷಿತ್ ರವರು ಒತ್ತುವರಿ ಆಗಿರುವ ಜಮೀನು ತೆರವುಗೊಳಿಸಿ ರಕ್ಷಿಸುವಂತೆ ತಹಸೀಲ್ದಾರ್ ರವರಿಗೆ ಆದೇಶಿಸಿದ್ದಾರೆ.


ಇದರಂತೆ ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ತಾಲೂಕು ಸೂಪರ್ ವೈಸರ್ ಪ್ರವೀಣ್,ತಾಲೂಕು ಭೂಮಾಪಕರಾದ ವೆಂಕಟೇಶ್,ಮಹದೇವಸ್ವಾಮಿ,ಮಹದೇವಸ್ವಾಮಿ
ಎಂ.ಉಪತಹಸೀಲ್ದಾರ್ ಲತಾ.ಜೆ.ಶರಣಮ್ಮ,ರಾಜಸ್ವ ನಿರೀಕ್ಷಕರಾದ ಡಿ.ಎಸ್.ಶಂಕರ್,ಗ್ರಾಮ ಆಡಳಿತಾಧಿಕಾರಿಗಳಾದ ಅಬ್ದುಲ್ ರಶೀದ್,ಚಂದ್ರಮೌಳೇಶ್ವರ,ಮುಖೇಶ್,ಮಾರುತಿ ನಾಯಕ್,ಹೇಮಂತ್ ಕುಮಾರ್,ನಾಡಕಚೇರಿ ಗುಮಾಸ್ತ ಮಂಜು,ವರುಣಾ ಠಾಣೆ ಪಿಎಸ್ಸೈ ಚೇತನ್

ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿ ಒತ್ತಯವರಿಯನ್ನ ತೆರವುಗೊಳಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *