ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

  • Mysore
  • June 23, 2024
  • No Comment
  • 571

ಪಾಳು ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನ ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.ಸೆರೆಯಾದ ಚಿರತೆ ಜೊತೆ ಸೆಲ್ಫಿ ಕಿಕ್ಕಿಸಲು ಯತ್ನಿಸಿದ ಯುವಕನ ಮೇಲೆ ದಾಳಿ ನಡೆಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಯುವಕನನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂಜನಗೂಡು ತಾಲೂಕು ಯಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಸಾಕು ಪ್ರಾಣಿಗಳನ್ನ ಬಲಿ ಪಡೆಯುತ್ತಿದ್ದ ಚಿರತೆ ಮಹದೇವಪ್ಪ ಎಂಬುವರಿಗೆ ಸೇರಿದ ಪಾಳು ಬಿದ್ದ ಮನೆಯಲ್ಲಿ ಅಡಗಿ ಕುಳಿತಿದೆ.ಹೊರಬರಲು ಸಾಧ್ಯವಾಗದಂತೆ ಸಂಪೂರ್ಣವಾಗಿ ಪಾಳು ಮನೆಯಲ್ಲಿ ಕೂಡಿಹಾಕಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆರ್‌ಎಫ್ಓ ನಿತಿನ್ ಕುಮಾರ್ ಮತ್ತು ಜನಾರ್ಧನ್ ರವರ ತಂಡ ಸ್ಥಳಕ್ಕೆ ಧಾವಿಸಿದೆ. ಸುಮಾರು ಎರಡು ಗಂಟೆಗಳ ಕಾಲ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ.ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಈ ವೇಳೆ ಸೆರೆಯಾದ ಚಿರತೆ ಬಳಿ ಬಂದ ಸ್ಥಳೀಯ ಯುವಕ ಜಯಶಂಕರ್ ಸೆಲ್ಫೀ ತೆಗೆಯಲು ಯತ್ನಿಸಿದ್ದಾನೆ.


ಈ ಸಂಧರ್ಭದಲ್ಲಿ ಚಿರತೆ ಯುವಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಜಯಶಂಕರ್ ನನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆರೆಯಾಗಿರುವ ಗಂಡು ಚಿರತೆಗೆ ನಂಜನಗೂಡಿನ ನರ್ಸರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಡಿಸಿಎಫ್ ಬಸವರಾಜ್ ರವರ ಆದೇಶದ ಮೇರೆಗೆ ಚೇತರಿಸಿಕೊಂಡ ಬಳಿಕ ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.
ಕಾರ್ಯಚರಣೆಯಲ್ಲಿ ಆರ್‌ಎಫ್‌ಒ ನಿತಿನ್ ಕುಮಾರ್ ಜನಾರ್ಧನ್ ಚೇತನ್ ಕುಮಾರ್ ಸೇರಿದಂತೆ ಸಾಕಷ್ಟು ಸಿಬ್ಬಂದಿಗಳು ಭಾಗವಹಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *