ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

  • Mysore
  • June 23, 2024
  • No Comment
  • 531

ಪಾಳು ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನ ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.ಸೆರೆಯಾದ ಚಿರತೆ ಜೊತೆ ಸೆಲ್ಫಿ ಕಿಕ್ಕಿಸಲು ಯತ್ನಿಸಿದ ಯುವಕನ ಮೇಲೆ ದಾಳಿ ನಡೆಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಯುವಕನನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂಜನಗೂಡು ತಾಲೂಕು ಯಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಸಾಕು ಪ್ರಾಣಿಗಳನ್ನ ಬಲಿ ಪಡೆಯುತ್ತಿದ್ದ ಚಿರತೆ ಮಹದೇವಪ್ಪ ಎಂಬುವರಿಗೆ ಸೇರಿದ ಪಾಳು ಬಿದ್ದ ಮನೆಯಲ್ಲಿ ಅಡಗಿ ಕುಳಿತಿದೆ.ಹೊರಬರಲು ಸಾಧ್ಯವಾಗದಂತೆ ಸಂಪೂರ್ಣವಾಗಿ ಪಾಳು ಮನೆಯಲ್ಲಿ ಕೂಡಿಹಾಕಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆರ್‌ಎಫ್ಓ ನಿತಿನ್ ಕುಮಾರ್ ಮತ್ತು ಜನಾರ್ಧನ್ ರವರ ತಂಡ ಸ್ಥಳಕ್ಕೆ ಧಾವಿಸಿದೆ. ಸುಮಾರು ಎರಡು ಗಂಟೆಗಳ ಕಾಲ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ.ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಈ ವೇಳೆ ಸೆರೆಯಾದ ಚಿರತೆ ಬಳಿ ಬಂದ ಸ್ಥಳೀಯ ಯುವಕ ಜಯಶಂಕರ್ ಸೆಲ್ಫೀ ತೆಗೆಯಲು ಯತ್ನಿಸಿದ್ದಾನೆ.


ಈ ಸಂಧರ್ಭದಲ್ಲಿ ಚಿರತೆ ಯುವಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಜಯಶಂಕರ್ ನನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆರೆಯಾಗಿರುವ ಗಂಡು ಚಿರತೆಗೆ ನಂಜನಗೂಡಿನ ನರ್ಸರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಡಿಸಿಎಫ್ ಬಸವರಾಜ್ ರವರ ಆದೇಶದ ಮೇರೆಗೆ ಚೇತರಿಸಿಕೊಂಡ ಬಳಿಕ ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.
ಕಾರ್ಯಚರಣೆಯಲ್ಲಿ ಆರ್‌ಎಫ್‌ಒ ನಿತಿನ್ ಕುಮಾರ್ ಜನಾರ್ಧನ್ ಚೇತನ್ ಕುಮಾರ್ ಸೇರಿದಂತೆ ಸಾಕಷ್ಟು ಸಿಬ್ಬಂದಿಗಳು ಭಾಗವಹಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *