ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

  • Mysore
  • June 23, 2024
  • No Comment
  • 499

ಪಾಳು ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನ ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.ಸೆರೆಯಾದ ಚಿರತೆ ಜೊತೆ ಸೆಲ್ಫಿ ಕಿಕ್ಕಿಸಲು ಯತ್ನಿಸಿದ ಯುವಕನ ಮೇಲೆ ದಾಳಿ ನಡೆಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಯುವಕನನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂಜನಗೂಡು ತಾಲೂಕು ಯಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಸಾಕು ಪ್ರಾಣಿಗಳನ್ನ ಬಲಿ ಪಡೆಯುತ್ತಿದ್ದ ಚಿರತೆ ಮಹದೇವಪ್ಪ ಎಂಬುವರಿಗೆ ಸೇರಿದ ಪಾಳು ಬಿದ್ದ ಮನೆಯಲ್ಲಿ ಅಡಗಿ ಕುಳಿತಿದೆ.ಹೊರಬರಲು ಸಾಧ್ಯವಾಗದಂತೆ ಸಂಪೂರ್ಣವಾಗಿ ಪಾಳು ಮನೆಯಲ್ಲಿ ಕೂಡಿಹಾಕಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆರ್‌ಎಫ್ಓ ನಿತಿನ್ ಕುಮಾರ್ ಮತ್ತು ಜನಾರ್ಧನ್ ರವರ ತಂಡ ಸ್ಥಳಕ್ಕೆ ಧಾವಿಸಿದೆ. ಸುಮಾರು ಎರಡು ಗಂಟೆಗಳ ಕಾಲ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ.ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಈ ವೇಳೆ ಸೆರೆಯಾದ ಚಿರತೆ ಬಳಿ ಬಂದ ಸ್ಥಳೀಯ ಯುವಕ ಜಯಶಂಕರ್ ಸೆಲ್ಫೀ ತೆಗೆಯಲು ಯತ್ನಿಸಿದ್ದಾನೆ.


ಈ ಸಂಧರ್ಭದಲ್ಲಿ ಚಿರತೆ ಯುವಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಜಯಶಂಕರ್ ನನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆರೆಯಾಗಿರುವ ಗಂಡು ಚಿರತೆಗೆ ನಂಜನಗೂಡಿನ ನರ್ಸರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಡಿಸಿಎಫ್ ಬಸವರಾಜ್ ರವರ ಆದೇಶದ ಮೇರೆಗೆ ಚೇತರಿಸಿಕೊಂಡ ಬಳಿಕ ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.
ಕಾರ್ಯಚರಣೆಯಲ್ಲಿ ಆರ್‌ಎಫ್‌ಒ ನಿತಿನ್ ಕುಮಾರ್ ಜನಾರ್ಧನ್ ಚೇತನ್ ಕುಮಾರ್ ಸೇರಿದಂತೆ ಸಾಕಷ್ಟು ಸಿಬ್ಬಂದಿಗಳು ಭಾಗವಹಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *