ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

  • Mysore
  • June 23, 2024
  • No Comment
  • 555

ಪಾಳು ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನ ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.ಸೆರೆಯಾದ ಚಿರತೆ ಜೊತೆ ಸೆಲ್ಫಿ ಕಿಕ್ಕಿಸಲು ಯತ್ನಿಸಿದ ಯುವಕನ ಮೇಲೆ ದಾಳಿ ನಡೆಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಯುವಕನನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂಜನಗೂಡು ತಾಲೂಕು ಯಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಸಾಕು ಪ್ರಾಣಿಗಳನ್ನ ಬಲಿ ಪಡೆಯುತ್ತಿದ್ದ ಚಿರತೆ ಮಹದೇವಪ್ಪ ಎಂಬುವರಿಗೆ ಸೇರಿದ ಪಾಳು ಬಿದ್ದ ಮನೆಯಲ್ಲಿ ಅಡಗಿ ಕುಳಿತಿದೆ.ಹೊರಬರಲು ಸಾಧ್ಯವಾಗದಂತೆ ಸಂಪೂರ್ಣವಾಗಿ ಪಾಳು ಮನೆಯಲ್ಲಿ ಕೂಡಿಹಾಕಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆರ್‌ಎಫ್ಓ ನಿತಿನ್ ಕುಮಾರ್ ಮತ್ತು ಜನಾರ್ಧನ್ ರವರ ತಂಡ ಸ್ಥಳಕ್ಕೆ ಧಾವಿಸಿದೆ. ಸುಮಾರು ಎರಡು ಗಂಟೆಗಳ ಕಾಲ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ.ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಈ ವೇಳೆ ಸೆರೆಯಾದ ಚಿರತೆ ಬಳಿ ಬಂದ ಸ್ಥಳೀಯ ಯುವಕ ಜಯಶಂಕರ್ ಸೆಲ್ಫೀ ತೆಗೆಯಲು ಯತ್ನಿಸಿದ್ದಾನೆ.


ಈ ಸಂಧರ್ಭದಲ್ಲಿ ಚಿರತೆ ಯುವಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಜಯಶಂಕರ್ ನನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆರೆಯಾಗಿರುವ ಗಂಡು ಚಿರತೆಗೆ ನಂಜನಗೂಡಿನ ನರ್ಸರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಡಿಸಿಎಫ್ ಬಸವರಾಜ್ ರವರ ಆದೇಶದ ಮೇರೆಗೆ ಚೇತರಿಸಿಕೊಂಡ ಬಳಿಕ ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.
ಕಾರ್ಯಚರಣೆಯಲ್ಲಿ ಆರ್‌ಎಫ್‌ಒ ನಿತಿನ್ ಕುಮಾರ್ ಜನಾರ್ಧನ್ ಚೇತನ್ ಕುಮಾರ್ ಸೇರಿದಂತೆ ಸಾಕಷ್ಟು ಸಿಬ್ಬಂದಿಗಳು ಭಾಗವಹಿಸಿದ್ದಾರೆ…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *