ಮಾದಕ ದ್ರವ್ಯ ಸೇವನೆ ಮತ್ತು ಕಳ್ಳ ಸಾಗಣೆ ಕುರಿತಂತೆ ಜಾಗೃತಿ…ಕಾಲೇಜುಗಳಿಗೆ ಭೇಟಿ ನೀಡಿ ಅವೇರ್ನಸ್…

ಮಾದಕ ದ್ರವ್ಯ ಸೇವನೆ ಮತ್ತು ಕಳ್ಳ ಸಾಗಣೆ ಕುರಿತಂತೆ ಜಾಗೃತಿ…ಕಾಲೇಜುಗಳಿಗೆ ಭೇಟಿ ನೀಡಿ ಅವೇರ್ನಸ್…

ಮೈಸೂರು,ಜೂ25,Tv10 ಕನ್ನಡ

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೈಸೂರು ನಗರದ ಪ್ರತಿ ಕಾಲೇಜುಗಳಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಮಾದಕ ವಸ್ತುಗಳ ಕಳ್ಳ ಸಾಗಣೆಯಿಂದ ಉಂಟಾಗುವ ಅನಾಹುತಗಳ ಬಗ್ಗೆ ಕಾಲೇಜು ವಿಧ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಾ ಸದ್ವಿದ್ಯಾ ಕಾಲೇಜು, ಮರಿಮಲ್ಲಪ್ಪ ಕಾಲೇಜು, ಟಿಟಿಎಲ್ ಕಾಲೇಜು ,ಶಾರದಾ ವಿಲಾಸ್ ಕಾಲೇಜು, ಡಿ. ಬನುಮಯ್ಯ ಕಾಲೇಜು ಸೇರಿದಂತೆ ಇನ್ನಿತರ ಕಾಲೇಜುಗಳಿಗೆ ಪದಾಧಿಕಾರಿಗಳು ಭೇಟಿ ನೀಡಿ ಮಾದಕ ದ್ರವ್ಯ ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿಯ ಪೋಸ್ಟರ್ ನೀಡಿ ತಿಳಿಸಲಾಗುತ್ತಿದೆ.ಈ ಸಂಧರ್ಭದಲ್ಲಿ

ಮಾತನಾಡಿದ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್ ರವರು
ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆಯಿಂದ ಸಮಾಜದ ಮೇಲಾಗುವ ಹಾನಿ ಮಾರಣಾಂತಿಕವಾದುದು, ಇದರ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ ತಡೆಯುವ ಉದ್ದೇಶದಿಂದ 1989 ರಿಂದ ಪ್ರತಿ ವರ್ಷ ಜೂನ್ 26 ರಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ.

ಈ ದಿನಾಚರಣೆಯ ಉದ್ದೇಶ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಗಳ ಕುರಿತು ವಿದ್ಯಾರ್ಥಿಗಳು, ಯುವಜನತೆ ಅರ್ಥ ಮಾಡಿಕೊಳ್ಳಬೇಕು ಮತ್ತು ಮಾದಕ ದ್ರವ್ಯ ಸೇವನೆಯಿಂದ ಎದುರಾಗುವ ಸಮಸ್ಯೆಗಳು ಮತ್ತು ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿ ಹಂತದಲ್ಲೇ ಅರಿವು ಮೂಡಿಸುವುದರಿಂದ ತಡೆಯಲು ಸಾಧ್ಯವಾಗುವುದು ಎಂದು ಹೇಳಿದರು

ಈ ಸಂದರ್ಭದಲ್ಲಿ ಟ್ರಸ್ಟ್ ಪದಾಧಿಕಾರಿಗಳಾದ
ಅಜಯ್ ಶಾಸ್ತ್ರಿ, ರವಿಚಂದ್ರ, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ರಾಕೇಶ್, ದುರ್ಗಾ ಪ್ರಸಾದ್ ,ಸಚಿನ್ ನಾಯಕ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *