ಸಿಎಂ ಕಾನ್ ವಾಯ್ ಗೆ ಬೈಕ್ ಸವಾರನಿಂದ ಅಡಚಣೆ…ಸಿಎಂ ಸುಗಮ ಸಂಚಾರಕ್ಕೆ ಅಡ್ಡಿ…ಬೈಕ್ ಸವಾರನ ವಿರುದ್ದ FIR ದಾಖಲು…

  • Mysore
  • June 26, 2024
  • No Comment
  • 102

ಮೈಸೂರು,ಜೂ25,Tv10 ಕನ್ನಡ

ಮುಖ್ಯಮಂತ್ರಿಗಳ ಕಾನ್ ವಾಯ್ ಸಾಗಲು ಅಡಚಣೆ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್ ಸವಾರನ ವಿರುದ್ದ ಮೈಸೂರಿನ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವರುಣ ಗ್ರಾಮದ ಕುಂಬ್ರಳ್ಳಿ ನಿವಾಸಿ ಶಿವು(30) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಜೂನ್ 23 ರಂದು ಮುಖ್ಯಮಂತ್ರಿಗಳ ಕಾನ್ ವಾಯ್ ಏರ್ ಪೋರ್ಟ್ ನಿಂದ ನಜರಬಾದ್ ನಲ್ಲಿರುವ ರಿಫ್ರೆಷ್ ಮೆಂಟ್ ಕಡೆಗೆ ಸಾಗುತ್ತಿತ್ತು.

ಕಾನ್ ವಾಯ್ ಸಾಗುವ ಹಾದಿಯಾದ ಮೈಸೂರು ನಂಜನಗೂಡು ಹೆದ್ದಾರಿಯ ರಾಜಹಂಸ ಜಂಕ್ಷನ್ ಬಳಿ ಬ್ಯಾರಿಕೇಡ್ ಗಳನ್ನ ಅಳವಡಿಸಿ ಗನ್ ಹೌಸ್ ರಸ್ತೆಯಿಂದ ಬರುವ ವಾಹನಗಳನ್ನ ನಿಯಂತ್ರಿಸುವ ಕರ್ತವ್ಯದಲ್ಲಿ ಸಂಚಾರಿ ಸಿಬ್ಬಂದಿಗಳಾದ ಅಣ್ಣಯ್ಯ ಹಾಗೂ ಉಪೇಂದ್ರ ರವರು ನಿರತರಾಗಿದ್ದರು.ಈ ವೇಳೆ ಶಿವು ತನ್ನ ಯಮಹಾ ಬೈಕ್ ನಲ್ಲಿ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ.ಇದನ್ನ ಗಮನಿಸಿದ ಅಣ್ಣಯ್ಯ ಹಾಗೂ ಉಪೇಂದ್ರ ರವರು ಬೈಕ್ ನಿಲ್ಲಿಸುವಂತೆ ಸೂಚನೆ ನೀಡಿದರು.ಆದರೆ ಇದ್ಯಾವುದನ್ನೂ ಲೆಕ್ಕಿಸದ ಶಿವು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಉಪೇಂದ್ರ ರವರಿಗೆ ಢಿಕ್ಕಿ ಹೊಡೆದು ನಂತರ ಬ್ಯಾರಿಕೇಡ್ ಗಳನ್ನ ಭೇಧಿಸಿ ಸಿಎಂ ಕಾನ್ ವಾಯ್ ಬರುತ್ತಿದ್ದ ವಿರುದ್ದ ದಿಕ್ಕಿನಲ್ಲಿ ಅತಿವೇಗವಾಗಿ ಚಲಿಸಿ ನಂತರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ.ಇದರಿಂದಾಗಿ ಸಿಎಂ ಕಾನ್ ವಾಯ್ ಸುಗಮವಾಗಿ ಸಾಗಲು ಕೆಲಕಾಲ ಅಡಚಣೆಯಾಗಿದೆ.ಬೈಕ್ ನಿಂದ ಬಿದ್ದು ಗಾಯಗೊಂಡ ಶಿವುನನ್ನು ಕಾನ್ ವಾಯ್ ಜೊತೆ ಬರುತ್ತಿದ್ದ ಅಂಬ್ಯುಲೆನ್ಸ್ ಮೂಲಕ ಗೋಪಾಲಗೌಡ ಆಸ್ಪತ್ರೆಗೆ ಸಾಗಿಸಲಾಗಿದೆ.ಸಿಎಂ ಕಾನ್ ವಾಯ್ ಗೆ ಅಡ್ಡಿಪಡಿಸಿ ಕರ್ತವ್ಯ ನಿರತ ಪೊಲೀಸ್ ಗೆ ಢಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆ ಶಿವು ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸಂಚಾರಿ ಪೇದೆ ಅಣ್ಣಯ್ಯ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *