ಸಿಎಂ ಕಾನ್ ವಾಯ್ ಗೆ ಬೈಕ್ ಸವಾರನಿಂದ ಅಡಚಣೆ…ಸಿಎಂ ಸುಗಮ ಸಂಚಾರಕ್ಕೆ ಅಡ್ಡಿ…ಬೈಕ್ ಸವಾರನ ವಿರುದ್ದ FIR ದಾಖಲು…

  • Mysore
  • June 26, 2024
  • No Comment
  • 135

ಮೈಸೂರು,ಜೂ25,Tv10 ಕನ್ನಡ

ಮುಖ್ಯಮಂತ್ರಿಗಳ ಕಾನ್ ವಾಯ್ ಸಾಗಲು ಅಡಚಣೆ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್ ಸವಾರನ ವಿರುದ್ದ ಮೈಸೂರಿನ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವರುಣ ಗ್ರಾಮದ ಕುಂಬ್ರಳ್ಳಿ ನಿವಾಸಿ ಶಿವು(30) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಜೂನ್ 23 ರಂದು ಮುಖ್ಯಮಂತ್ರಿಗಳ ಕಾನ್ ವಾಯ್ ಏರ್ ಪೋರ್ಟ್ ನಿಂದ ನಜರಬಾದ್ ನಲ್ಲಿರುವ ರಿಫ್ರೆಷ್ ಮೆಂಟ್ ಕಡೆಗೆ ಸಾಗುತ್ತಿತ್ತು.

ಕಾನ್ ವಾಯ್ ಸಾಗುವ ಹಾದಿಯಾದ ಮೈಸೂರು ನಂಜನಗೂಡು ಹೆದ್ದಾರಿಯ ರಾಜಹಂಸ ಜಂಕ್ಷನ್ ಬಳಿ ಬ್ಯಾರಿಕೇಡ್ ಗಳನ್ನ ಅಳವಡಿಸಿ ಗನ್ ಹೌಸ್ ರಸ್ತೆಯಿಂದ ಬರುವ ವಾಹನಗಳನ್ನ ನಿಯಂತ್ರಿಸುವ ಕರ್ತವ್ಯದಲ್ಲಿ ಸಂಚಾರಿ ಸಿಬ್ಬಂದಿಗಳಾದ ಅಣ್ಣಯ್ಯ ಹಾಗೂ ಉಪೇಂದ್ರ ರವರು ನಿರತರಾಗಿದ್ದರು.ಈ ವೇಳೆ ಶಿವು ತನ್ನ ಯಮಹಾ ಬೈಕ್ ನಲ್ಲಿ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ.ಇದನ್ನ ಗಮನಿಸಿದ ಅಣ್ಣಯ್ಯ ಹಾಗೂ ಉಪೇಂದ್ರ ರವರು ಬೈಕ್ ನಿಲ್ಲಿಸುವಂತೆ ಸೂಚನೆ ನೀಡಿದರು.ಆದರೆ ಇದ್ಯಾವುದನ್ನೂ ಲೆಕ್ಕಿಸದ ಶಿವು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಉಪೇಂದ್ರ ರವರಿಗೆ ಢಿಕ್ಕಿ ಹೊಡೆದು ನಂತರ ಬ್ಯಾರಿಕೇಡ್ ಗಳನ್ನ ಭೇಧಿಸಿ ಸಿಎಂ ಕಾನ್ ವಾಯ್ ಬರುತ್ತಿದ್ದ ವಿರುದ್ದ ದಿಕ್ಕಿನಲ್ಲಿ ಅತಿವೇಗವಾಗಿ ಚಲಿಸಿ ನಂತರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ.ಇದರಿಂದಾಗಿ ಸಿಎಂ ಕಾನ್ ವಾಯ್ ಸುಗಮವಾಗಿ ಸಾಗಲು ಕೆಲಕಾಲ ಅಡಚಣೆಯಾಗಿದೆ.ಬೈಕ್ ನಿಂದ ಬಿದ್ದು ಗಾಯಗೊಂಡ ಶಿವುನನ್ನು ಕಾನ್ ವಾಯ್ ಜೊತೆ ಬರುತ್ತಿದ್ದ ಅಂಬ್ಯುಲೆನ್ಸ್ ಮೂಲಕ ಗೋಪಾಲಗೌಡ ಆಸ್ಪತ್ರೆಗೆ ಸಾಗಿಸಲಾಗಿದೆ.ಸಿಎಂ ಕಾನ್ ವಾಯ್ ಗೆ ಅಡ್ಡಿಪಡಿಸಿ ಕರ್ತವ್ಯ ನಿರತ ಪೊಲೀಸ್ ಗೆ ಢಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆ ಶಿವು ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸಂಚಾರಿ ಪೇದೆ ಅಣ್ಣಯ್ಯ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *