• Mysore
  • June 27, 2024
  • No Comment
  • 150

ನಾಡಪ್ರಭು ಕೆಂಪೇಗೌಡ ಜಯಂತಿ ಸಂಭ್ರಮ… 2000 ಹೋಳಿಗೆ ವಿತರಣೆ…

ಮೈಸೂರು,ಜೂ27,Tv10 ಕನ್ನಡ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಹೋಳಿಗೆ ವಿತರಣೆ ಮಾಡಲಾಯಿತು.  515 ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯ ಮೆರವಣಿಗೆಯ ವೇಳೆ 2,000 ಹೋಳಿಗೆಯನ್ನು   ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ವಿತರಿಸಿದರು. ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಸಹ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ.
ಕೆಂಪೇಗೌಡ ಅವರು ನಡೆಸಿದ ರಾಜಾಡಳಿತವೂ ಇತರ ರಾಜರಿಗೆ ಮಾದರಿಯಾಗಿದ್ದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಇಂತಹ ಮಹಾನ್ ನಾಯಕರು ನೆಲೆಸಿದ ನಾಡಿನಲ್ಲಿ ಬದುಕುತ್ತಿರುವ ನಾವುಗಳೇ ಪುಣ್ಯವಂತರು ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಸ್ಮರಿಸಿದರು.

ಈ ವೇಳೆ ಶಾಸಕರಾದ ಜಿ ಟಿ ದೇವೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮರಿಗೌಡ, ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್, ಮೂಡ ಮಾಜಿ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಹೇಮಂತ್ ಕುಮಾರ್ ಗೌಡ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್,
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,
ಇಂದ್ರ ಗಾಂಧಿ ಬ್ಲಾಕ್ ಅಧ್ಯಕ್ಷರಾದ ಮಂಚೇಗೌಡನ ಕೊಪ್ಪಲು ರವಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಒಕ್ಕಲಿಗರ ಸಂಘದ ಕಾರ್ಯದರ್ಶಿ ಚೇತನ್ ಗೌಡ, ಆನಂದ್, ಸೂರಜ್, ಸದಾಶಿವ್, ಗಿರೀಶ್ ಗೌಡ , ಒಕ್ಕಲಿಗ ಸಂಘದ ನಿರ್ದೇಶಕರುಗಳು  ಮುಖಂಡರು ಹಾಜರಿದ್ದರು…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *