• Mysore
  • June 27, 2024
  • No Comment
  • 141

ನಾಡಪ್ರಭು ಕೆಂಪೇಗೌಡ ಜಯಂತಿ ಸಂಭ್ರಮ… 2000 ಹೋಳಿಗೆ ವಿತರಣೆ…

ಮೈಸೂರು,ಜೂ27,Tv10 ಕನ್ನಡ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಹೋಳಿಗೆ ವಿತರಣೆ ಮಾಡಲಾಯಿತು.  515 ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯ ಮೆರವಣಿಗೆಯ ವೇಳೆ 2,000 ಹೋಳಿಗೆಯನ್ನು   ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ವಿತರಿಸಿದರು. ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಸಹ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ.
ಕೆಂಪೇಗೌಡ ಅವರು ನಡೆಸಿದ ರಾಜಾಡಳಿತವೂ ಇತರ ರಾಜರಿಗೆ ಮಾದರಿಯಾಗಿದ್ದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಇಂತಹ ಮಹಾನ್ ನಾಯಕರು ನೆಲೆಸಿದ ನಾಡಿನಲ್ಲಿ ಬದುಕುತ್ತಿರುವ ನಾವುಗಳೇ ಪುಣ್ಯವಂತರು ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಸ್ಮರಿಸಿದರು.

ಈ ವೇಳೆ ಶಾಸಕರಾದ ಜಿ ಟಿ ದೇವೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮರಿಗೌಡ, ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್, ಮೂಡ ಮಾಜಿ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಹೇಮಂತ್ ಕುಮಾರ್ ಗೌಡ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್,
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,
ಇಂದ್ರ ಗಾಂಧಿ ಬ್ಲಾಕ್ ಅಧ್ಯಕ್ಷರಾದ ಮಂಚೇಗೌಡನ ಕೊಪ್ಪಲು ರವಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಒಕ್ಕಲಿಗರ ಸಂಘದ ಕಾರ್ಯದರ್ಶಿ ಚೇತನ್ ಗೌಡ, ಆನಂದ್, ಸೂರಜ್, ಸದಾಶಿವ್, ಗಿರೀಶ್ ಗೌಡ , ಒಕ್ಕಲಿಗ ಸಂಘದ ನಿರ್ದೇಶಕರುಗಳು  ಮುಖಂಡರು ಹಾಜರಿದ್ದರು…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *