ಪಾಲಿಕೆ ಆಸ್ತಿ ಖಾಸಗಿ ವ್ಯಕ್ತಿಗಳ ಪಾಲು…ನಕಲಿ ದಾಖಲೆ ಸೃಷ್ಟಿಸಿ ಖಾತೆ…ವಲಯ 7 ರ ಅಧಿಕಾರಿಗಳೇ ಶಾಮೀಲು…ದಾಖಲೆ ಬಿಡುಗಡೆ ಮಾಡಿದ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ…

ಪಾಲಿಕೆ ಆಸ್ತಿ ಖಾಸಗಿ ವ್ಯಕ್ತಿಗಳ ಪಾಲು…ನಕಲಿ ದಾಖಲೆ ಸೃಷ್ಟಿಸಿ ಖಾತೆ…ವಲಯ 7 ರ ಅಧಿಕಾರಿಗಳೇ ಶಾಮೀಲು…ದಾಖಲೆ ಬಿಡುಗಡೆ ಮಾಡಿದ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ…

  • Mysore
  • July 3, 2024
  • No Comment
  • 1253

ಮೈಸೂರು,ಜು3,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕೋಟ್ಯಾಂತರ ರೂ ಬೆಲೆ ಬಾಳುವ ಆಸ್ತಿಗೆ ನಕಲಿ ದಾಖಲೆಗಳನ್ನ ಸೃಷ್ಟಿಸಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಖಾತೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.ದಾಖಲೆಗಳನ್ನ ಮಾಹಿತಿ ಹಕ್ಕಿನ ಮುಖಾಂತರ ಪಡೆದ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಬಿಡುಗಡೆ ಮಾಡಿದ್ದಾರೆ.ಅಕ್ರಮವಾಗಿ ಖಾತೆ ಮಾಡಿಕೊಡುವಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ ಅಧಿಕಾರಿಗಳೇ ಶಾಮೀಲಾಗಿದ್ದಾರೆ.

ಮಲಿನ‌ನೀರು ಶುದ್ದೀಕರಣ ಘಟಕ ಸ್ಥಾಪಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಕೆಸರೆ ಭಾಗದ ಸ ನಂ.501/1 ರಿಂದ 501/8 ರವರೆಗೆ ಹಲವು ಜಮೀನುಗಳನ್ನ 1997-98 ನೇ ಸಾಲಿನಲ್ಲಿ LAQ CR no.230/96-97 ರ ಅನ್ವಯದಂತೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ.ಸದರಿ ಜಮೀನುಗಳ ಮಾಲೀಕರಿಗೆ ಪರಿಹಾರವನ್ನೂ ಸಹ ನೀಡಲಾಗಿದೆ.

ಸ್ವಾಧೀನ ಪಡಿಸಿಕೊಳ್ಳಲಾದ ಜಮೀನಿನ ಪೈಕಿ ಸರ್ವೆ ನಂ.501/7 ರಲ್ಲಿ ಪೋಡಿ ಜಮೀನು ಸೇರಿದಂತೆ ಸುಮಾರು ಒಂದು ಎಕ್ರೆಗೂ ಹೆಚ್ಚು ಪ್ರದೇಶದ ಜಮೀನನ್ನ ಖಾಸಗಿ ವ್ಯಕ್ತಿಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿದೆ.ಸರ್ವೆ ನಂ.501/7 ಕ್ಕೆ 501/7b ಎಂದು ನಕಲಿ ದಾಖಲೆಗಳನ್ನ ಸೃಷ್ಟಿಸಲಾಗಿದೆ.ಇಲ್ಲದಿರುವ ಸರ್ವೆ ನಂ ಸೃಷ್ಟಿಸಿದ ವಲಯ ಕಚೇರಿ 7 ಅಧಿಕಾರಿಗಳು ಭೂಗಳ್ಳರ ಜೊತೆ ಶಾಮೀಲಾಗಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ.ವಲಯ ಕಚೇರಿ 7 ರ RI,ARO,RO,asst.commissioner ರವರುಗಳೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.


ತಮ್ಮ ಅಕ್ರಮವನ್ನ ಮುಚ್ಚಿಹಾಕುವ ಉದ್ದೇಶದಿಂದ ಸರ್ವೆ ನಂ 504/3 ರ ಜಮೀನಿನಲ್ಲಿ ಬೆಳೆದಿರುವ ತೆಂಗಿನ ಮರಗಳನ್ನ ಖಾಸಗಿ ವ್ಯಕ್ತಿಗಳು ಕಟಾವ್ ಮಾಡಿದ್ದಾರೆಂದು ಆರೋಪಿಸಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ FIR ಮಾಡಿಸುವ ಮೂಲಕ ದಾರಿ ತಪ್ಪಿಸುವ ಕೆಲಸ ಅಧಿಕಾರಿಗಳು ಮಾಡಿದ್ದಾರೆ.ಈ ಅಕ್ರಮವನ್ನ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ದಾಖಲೆಗಳನ್ನ ಪಡೆದಿದ್ದಾರೆ.

ಒಂದೆಡೆ ಮುಡಾ ಅಕ್ರಮಗಳು ಬೆಳಕಿಗೆ ಬಂದು ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದ್ದರೆ ಮತ್ತೊಂದೆಡೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಭೂಗಳ್ಳರ ಜೊತೆ ಕೈ ಜೋಡಿಸಿ ಅಕ್ರಮಗಳಿಗೆ ಸಾಥ್ ನೀಡುತ್ತಿದ್ದಾರೆ.ಸಧ್ಯ ಕೂಡಲೇ ನಡೆದಿರುವ ಅಕ್ರಮ ಖಾತೆ 501/7b ರದ್ದು ಪಡಿಸಬೇಕು,ಹಾಗೂ ಅಕ್ರಮಕ್ಕೆ ಸಾಥ್ ನೀಡಿದ ವಲಯ 7 ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ…

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ…

ಮೈಸೂರು,ಫೆ4,Tv10 ಕನ್ನಡ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು…
ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…

Leave a Reply

Your email address will not be published. Required fields are marked *