ಪಾಲಿಕೆ ಆಸ್ತಿ ಖಾಸಗಿ ವ್ಯಕ್ತಿಗಳ ಪಾಲು…ನಕಲಿ ದಾಖಲೆ ಸೃಷ್ಟಿಸಿ ಖಾತೆ…ವಲಯ 7 ರ ಅಧಿಕಾರಿಗಳೇ ಶಾಮೀಲು…ದಾಖಲೆ ಬಿಡುಗಡೆ ಮಾಡಿದ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ…

ಪಾಲಿಕೆ ಆಸ್ತಿ ಖಾಸಗಿ ವ್ಯಕ್ತಿಗಳ ಪಾಲು…ನಕಲಿ ದಾಖಲೆ ಸೃಷ್ಟಿಸಿ ಖಾತೆ…ವಲಯ 7 ರ ಅಧಿಕಾರಿಗಳೇ ಶಾಮೀಲು…ದಾಖಲೆ ಬಿಡುಗಡೆ ಮಾಡಿದ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ…

  • Mysore
  • July 3, 2024
  • No Comment
  • 1150

ಮೈಸೂರು,ಜು3,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕೋಟ್ಯಾಂತರ ರೂ ಬೆಲೆ ಬಾಳುವ ಆಸ್ತಿಗೆ ನಕಲಿ ದಾಖಲೆಗಳನ್ನ ಸೃಷ್ಟಿಸಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಖಾತೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.ದಾಖಲೆಗಳನ್ನ ಮಾಹಿತಿ ಹಕ್ಕಿನ ಮುಖಾಂತರ ಪಡೆದ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಬಿಡುಗಡೆ ಮಾಡಿದ್ದಾರೆ.ಅಕ್ರಮವಾಗಿ ಖಾತೆ ಮಾಡಿಕೊಡುವಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ ಅಧಿಕಾರಿಗಳೇ ಶಾಮೀಲಾಗಿದ್ದಾರೆ.

ಮಲಿನ‌ನೀರು ಶುದ್ದೀಕರಣ ಘಟಕ ಸ್ಥಾಪಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಕೆಸರೆ ಭಾಗದ ಸ ನಂ.501/1 ರಿಂದ 501/8 ರವರೆಗೆ ಹಲವು ಜಮೀನುಗಳನ್ನ 1997-98 ನೇ ಸಾಲಿನಲ್ಲಿ LAQ CR no.230/96-97 ರ ಅನ್ವಯದಂತೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ.ಸದರಿ ಜಮೀನುಗಳ ಮಾಲೀಕರಿಗೆ ಪರಿಹಾರವನ್ನೂ ಸಹ ನೀಡಲಾಗಿದೆ.

ಸ್ವಾಧೀನ ಪಡಿಸಿಕೊಳ್ಳಲಾದ ಜಮೀನಿನ ಪೈಕಿ ಸರ್ವೆ ನಂ.501/7 ರಲ್ಲಿ ಪೋಡಿ ಜಮೀನು ಸೇರಿದಂತೆ ಸುಮಾರು ಒಂದು ಎಕ್ರೆಗೂ ಹೆಚ್ಚು ಪ್ರದೇಶದ ಜಮೀನನ್ನ ಖಾಸಗಿ ವ್ಯಕ್ತಿಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿದೆ.ಸರ್ವೆ ನಂ.501/7 ಕ್ಕೆ 501/7b ಎಂದು ನಕಲಿ ದಾಖಲೆಗಳನ್ನ ಸೃಷ್ಟಿಸಲಾಗಿದೆ.ಇಲ್ಲದಿರುವ ಸರ್ವೆ ನಂ ಸೃಷ್ಟಿಸಿದ ವಲಯ ಕಚೇರಿ 7 ಅಧಿಕಾರಿಗಳು ಭೂಗಳ್ಳರ ಜೊತೆ ಶಾಮೀಲಾಗಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ.ವಲಯ ಕಚೇರಿ 7 ರ RI,ARO,RO,asst.commissioner ರವರುಗಳೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.


ತಮ್ಮ ಅಕ್ರಮವನ್ನ ಮುಚ್ಚಿಹಾಕುವ ಉದ್ದೇಶದಿಂದ ಸರ್ವೆ ನಂ 504/3 ರ ಜಮೀನಿನಲ್ಲಿ ಬೆಳೆದಿರುವ ತೆಂಗಿನ ಮರಗಳನ್ನ ಖಾಸಗಿ ವ್ಯಕ್ತಿಗಳು ಕಟಾವ್ ಮಾಡಿದ್ದಾರೆಂದು ಆರೋಪಿಸಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ FIR ಮಾಡಿಸುವ ಮೂಲಕ ದಾರಿ ತಪ್ಪಿಸುವ ಕೆಲಸ ಅಧಿಕಾರಿಗಳು ಮಾಡಿದ್ದಾರೆ.ಈ ಅಕ್ರಮವನ್ನ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ದಾಖಲೆಗಳನ್ನ ಪಡೆದಿದ್ದಾರೆ.

ಒಂದೆಡೆ ಮುಡಾ ಅಕ್ರಮಗಳು ಬೆಳಕಿಗೆ ಬಂದು ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದ್ದರೆ ಮತ್ತೊಂದೆಡೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಭೂಗಳ್ಳರ ಜೊತೆ ಕೈ ಜೋಡಿಸಿ ಅಕ್ರಮಗಳಿಗೆ ಸಾಥ್ ನೀಡುತ್ತಿದ್ದಾರೆ.ಸಧ್ಯ ಕೂಡಲೇ ನಡೆದಿರುವ ಅಕ್ರಮ ಖಾತೆ 501/7b ರದ್ದು ಪಡಿಸಬೇಕು,ಹಾಗೂ ಅಕ್ರಮಕ್ಕೆ ಸಾಥ್ ನೀಡಿದ ವಲಯ 7 ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *