• Mysore
  • July 3, 2024
  • No Comment
  • 84

ಕೆ.ಆರ್.ಸಾಗರ ಅಣೆಕಟ್ಟೆಯ ಸಮೀಪ ಬಲುಮರಿ ಪ್ರವಾಸಿ ತಾಣದಲ್ಲಿರುವ ಎಡಮುರಿ ಪ್ರವಾಸಿ ತಾಣದಲ್ಲಿನ ಕಾವೇರಿ ನದಿಯಲ್ಲಿ ಪವರ್ ಪ್ಲಾಂಟ್ ನಿರ್ಮಿಸಲು ಹೊರಟ್ಟಿರುವ ವ್ಯಕ್ತಿಯೊಬ್ಬರು ಯಾವುದೇ ಗಡಿ ಗುರುತು ಮಾಡದೆ ಅಕ್ರಮವಾಗಿ ನದಿ ಮತ್ತು ರಸ್ತೆ ತಡೆಗೋಡೆ ನಿರ್ಮಿಸುತ್ತಿದ್ದಾರೆಂದು ಆಕ್ರೋಷ ವ್ಯಕ್ತಿ ಪಡಿಸಿದ ಕ್ರಮ ತೆಗೆದುಕೊಳ್ಳಲು ನಿರ್ಲಕ್ಷ ತೋರುತ್ತಿರುವ ತಹಶೀಲ್ದಾರ್ ಮತ್ತು  ಕಾ.ನೀ.ನಿಗಮದ ವಿರುದ್ಧ ಗ್ರಾಮಸ್ಥರು ಸ್ಥಳದಲ್ಲಿ ಘೋಷಣೆ ಕೂಗಿದರು.
    ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿ ಕಾ.ನೀ.ನಿಗಮದ ಸಹಾಯಕ ಅಭಿಯಂತರ ಸುರೇಶ್ ಕುಮಾರ್  ತರಾಟೆ ತೆಗೆದುಕೊಂಡ ಗ್ರಾಮಸ್ಥರು ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ತಡೆಗೋಡೆ ನಿರ್ಮಿಸುತ್ತಿದ್ದರೂ ಕೂಡ ಸುಮ್ಮನಿದ್ದಿರಿ, ಯಾರ ಪ್ರಭಾವಕ್ಕೆ ಒಳಾಗಾಗಿದ್ದರಿ ಎಂದು ಹೇಳಿದರು.
  ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಅಭಿಯಂತರ ಅವೈಜ್ಙಾನಿಕ ಕಾಮಗಾರಿ ಬಗ್ಗೆ ನೀವು ನೀಡಿದ ಮನವಿಯನ್ನು ಹಾಗೂ ನಾನು ಪರಿಶೀಲನೆ ನಡೆಸಿದ ವರದಿಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದರು.
  ಮಜ್ಜಿಗೆಪುರ, ಬೆಳಗೊಳ, ಕೆ.ಆರ್.ಸಾಗರ, ಹೊಂಗಳ್ಳಿ ಗ್ರಾಮಗಳ ಹಲವಾರು ಗ್ರಾಮಸ್ಥರು ಎಡಮುರಿ ಪ್ರಸಿದ್ದ ಪ್ರವಾಸಿ ತಾಣವಾಗಿದ್ದು, ಇಲ್ಲಿ ನೂರಾರು ವರ್ಷಗಳ ಇತಿಹಾಸವಿದ್ದು ಅನೇಕ ಜಾತಿ ಪ್ರಾಣಿ-ಪಕ್ಷಿಗಳ ಸಂತತಿ ಇದ್ದು, ಏಕೋ ಜೋನ್ ಎಂದು ಘೋಷಣೆಯಾಗಿದ್ದು, ಇದೇ ಸ್ಥಳದಲ್ಲಿ ಸುತ್ತಮುತ್ತ ಗ್ರಾಮದವರು ತಮ್ಮ ಊರ ಹಬ್ಬಕ್ಕೆ ಇದೇ ಜಾಗದಲ್ಲಿ ಪೂಜೆ ಸಲ್ಲಿಸುತ್ತಾರೆ ಹಾಗೂ ನೀರನ್ನು ತೆಗೆದುಕೊಂಡು ಹೋಗುತ್ತಾರೆ, ಈ ಪ್ರದೇಶದ ಸುತ್ತಮುತ್ತಲಿನ  ಜಮೀನು ಕೆಲಸ ಕ್ಕೆ ಬರುವ ಜನರು ತಮ್ಮ ಜಾನುವಾರುಗಳಿಗೆ ನೀರು ಕುಡಿಸಲು ಈ ಸ್ಥಳಕ್ಕೆ ಬರುತ್ತಾರೆ, ಈ ಪ್ರಭಾವ ಬೀರಿದ ವ್ಯಕ್ತಿ ಏಕಾ ಏಕಿ ತಡೆಗೋಡೆ ನೀರ್ಮಾಣ ಮಾಡುತ್ತಿದ್ದು ಸರಿಯಲ್ಲ,  ಹಲವು ವರ್ಷಗಳ ಹಿಂದೆ ಅನುಮತಿ ಪಡೆದು ಸ್ಥಳ ನಿಗದಿ ಪಡಿಸದೆ  ಅವೈಜ್ಙಾನಿಕವಾಗಿ ನದಿಯಲ್ಲಿ ಕೆಲಸ ಮಾಡುತ್ತಿರುವುದ ಸರಿಯಲ್ಲ ಸಂಬAಧಪಟ್ಟ ಅಧಿಕಾರಿಗ ಇದನ್ನು ತೆರವುಗೊಳಿಸಬೇಕು, ಹಾಗೂ ಪವರ್ ಪ್ಲಾಂಟ್ ಸ್ಥಳಾಂತರ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಯುತ್ತದೆ  ಎಂದು ಬೆಳಗೊಳ ಗ್ರಾ.ಪಂ ಅಧ್ಯಕ್ಷ ಬಿ.ವಿ.ಸುರೇಶ್ ಈ ಸಂದರ್ಭದಲ್ಲಿ ಪತ್ರಿಕೆಗೆ ತಿಳಿಸಿದರು.
  ಈ ಸಂದರ್ಭದಲ್ಲಿ ಬೆಳಗೊಳ ತಾ.ಪಂ ಮಾಜಿ ಸದಸ್ಯ ಬಿ.ಟಿ.ಸ್ವಾಮಿಗೌಡ, ಬೆಳಗೊಳ ಗ್ರಾ.ಪಂ ಸದಸ್ಯ ಪುಟ್ಟರಾಜು, ಗ್ರಾ.ಪಂ ಮಾಜಿ ಸದಸ್ಯ ಮಂಜನಾಥ್,  ಭಾರ್ಗವ, ಪುಟ್ಟೇಗೌಡ, ರಾಮೇಗೌಡ, ಶಿವೇಗೌಡ, ಎಂ.ಬಿ.ಚAದ್ರು, ಎಂ.ಸಿ.ಚAದ್ರ, ಶ್ರೀನಿವಾಸ್, ಕೆ.ಆರ್.ಎಸ್ ಗ್ರಾ.ಪಂ ಸದಸ್ಯ ರವಿಕುಮಾರ್, ಹೊಸ ಉಂಡವಾಡಿ ಸಂಜು ಸೇರಿದಂತೆ ಮಜ್ಜಿಗೆಪುರ, ಬೆಳಗೊಳ, ಕೆ.ಆರ್.ಸಾಗರ, ಹೊಂಗಳ್ಳಿ ಗ್ರಾಮಗಳ ಗ್ರಾಮಸ್ಥರು ಇದ್ದರು.

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *