ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ…ವೃಷಣ ಅಮುಕಿ ಚಾಕುವಿನಿಂದ ಇರಿತ…7 ಮಂದಿ ವಿರುದ್ದ FIR ದಾಖಲು…

ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ…ವೃಷಣ ಅಮುಕಿ ಚಾಕುವಿನಿಂದ ಇರಿತ…7 ಮಂದಿ ವಿರುದ್ದ FIR ದಾಖಲು…

ಮೈಸೂರು,ಜು5,Tv10 ಕನ್ನಡ

ಕೌಟುಂಬಿಕ ಕಲಹ ಹಿನ್ನಲೆ ಕೋಪಿಸಿಕೊಂಡು ತವರು ಮನೆಯಲ್ಲಿದ್ದ ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ ನಡೆಸಿ ವೃಷಣ ಗಾಯಗೊಳಿಸಿ ಚಾಕುವಿನಿಂದ ಇರಿದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬೋಗಾದಿ ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ಅಳಿಯ ಸುಜಿತ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಭಂಧ ಅತ್ತೆ ಉಮಾ,ಮಾವ ಲೋಕೇಶ್,ಭಾವಮೈದ ದೇವರಾಜ್,ಚಿಕ್ಕಮಾವ ಅಜಯ್,ಉಮಾ ರವರ ಅಕ್ಕಂದಿರಾದ ಸೌಭಾಗ್ಯ,ಮಂಜುಳಾ ಹಾಗೂ ಸ್ನೇಹಿತೆ ಮಮತಾ ಎಂಬುವರ ಮೇಲೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಜಿತ್ ಹಾಗೂ ನಿಖಿತಾ ಪರಸ್ಪರ ಪ್ರೀತಿಸಿ ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದರು.ಸಣ್ಣಪುಟ್ಟ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು.ನಿಖಿತಾಗೆ ಅನಾರೋಗ್ಯ ಹಿನ್ನಲೆ ತವರು ಮನೆ ಸೇರಿದ್ದಳು.ಸುಮಾರು ಒಂದು ತಿಂಗಳಾದರೂ ಮನೆಗೆ ಹಿಂದಿರುಗಲಿಲ್ಲ.ಹೀಗಾಗಿ ಪತ್ನಿಯನ್ನ ಕರೆತರಲು ಸುಜಿತ್ ಬೋಗಾದಿ ಗ್ರಾಮಕ್ಕೆ ತಮ್ಮ ಸಹೋದರನ ಜೊತೆ ತೆರಳಿದ್ದಾರೆ.ಈ ವೇಳೆ ಕ್ಯಾತೆ ತೆಗೆದ ಅತ್ತೆ,ಮಾವ ಹಾಗೂ ಸಂಭಂಧಿಕರು ಸುಜಿತ್ ಮೇಲೆ ಹಲ್ಲೆ ಮಾಡಿದ್ದಾರೆ.ಉಮಾ ರವರ ಅಕ್ಕಂದಿರು ಸುಜಿತ್ ರವರ ವೃಷಣ ಅಮುಕಿ ಗಾಯಗೊಳಿಸಿದ್ದಾರೆ.ದೇವರಾಜು ಚಾಕುವಿನಿಂದ ಇರಿದಿದ್ದಾನೆ.ಈ ವೇಳೆ ಅಕ್ಕಪಕ್ಕದ ಮನೆಯವರು ಜಗಳ ಬಿಡಿಸಿದ್ದಾರೆ.ಗಾಯಗೊಂಡ ಸುಜಿತ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ನಡೆಸಿದ ಅತ್ತೆ,ಮಾವ ಹಾಗೂ ಸಂಭಂಧಿಕರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *