ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ…ವೃಷಣ ಅಮುಕಿ ಚಾಕುವಿನಿಂದ ಇರಿತ…7 ಮಂದಿ ವಿರುದ್ದ FIR ದಾಖಲು…

ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ…ವೃಷಣ ಅಮುಕಿ ಚಾಕುವಿನಿಂದ ಇರಿತ…7 ಮಂದಿ ವಿರುದ್ದ FIR ದಾಖಲು…

ಮೈಸೂರು,ಜು5,Tv10 ಕನ್ನಡ

ಕೌಟುಂಬಿಕ ಕಲಹ ಹಿನ್ನಲೆ ಕೋಪಿಸಿಕೊಂಡು ತವರು ಮನೆಯಲ್ಲಿದ್ದ ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ ನಡೆಸಿ ವೃಷಣ ಗಾಯಗೊಳಿಸಿ ಚಾಕುವಿನಿಂದ ಇರಿದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬೋಗಾದಿ ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ಅಳಿಯ ಸುಜಿತ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಭಂಧ ಅತ್ತೆ ಉಮಾ,ಮಾವ ಲೋಕೇಶ್,ಭಾವಮೈದ ದೇವರಾಜ್,ಚಿಕ್ಕಮಾವ ಅಜಯ್,ಉಮಾ ರವರ ಅಕ್ಕಂದಿರಾದ ಸೌಭಾಗ್ಯ,ಮಂಜುಳಾ ಹಾಗೂ ಸ್ನೇಹಿತೆ ಮಮತಾ ಎಂಬುವರ ಮೇಲೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಜಿತ್ ಹಾಗೂ ನಿಖಿತಾ ಪರಸ್ಪರ ಪ್ರೀತಿಸಿ ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದರು.ಸಣ್ಣಪುಟ್ಟ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು.ನಿಖಿತಾಗೆ ಅನಾರೋಗ್ಯ ಹಿನ್ನಲೆ ತವರು ಮನೆ ಸೇರಿದ್ದಳು.ಸುಮಾರು ಒಂದು ತಿಂಗಳಾದರೂ ಮನೆಗೆ ಹಿಂದಿರುಗಲಿಲ್ಲ.ಹೀಗಾಗಿ ಪತ್ನಿಯನ್ನ ಕರೆತರಲು ಸುಜಿತ್ ಬೋಗಾದಿ ಗ್ರಾಮಕ್ಕೆ ತಮ್ಮ ಸಹೋದರನ ಜೊತೆ ತೆರಳಿದ್ದಾರೆ.ಈ ವೇಳೆ ಕ್ಯಾತೆ ತೆಗೆದ ಅತ್ತೆ,ಮಾವ ಹಾಗೂ ಸಂಭಂಧಿಕರು ಸುಜಿತ್ ಮೇಲೆ ಹಲ್ಲೆ ಮಾಡಿದ್ದಾರೆ.ಉಮಾ ರವರ ಅಕ್ಕಂದಿರು ಸುಜಿತ್ ರವರ ವೃಷಣ ಅಮುಕಿ ಗಾಯಗೊಳಿಸಿದ್ದಾರೆ.ದೇವರಾಜು ಚಾಕುವಿನಿಂದ ಇರಿದಿದ್ದಾನೆ.ಈ ವೇಳೆ ಅಕ್ಕಪಕ್ಕದ ಮನೆಯವರು ಜಗಳ ಬಿಡಿಸಿದ್ದಾರೆ.ಗಾಯಗೊಂಡ ಸುಜಿತ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ನಡೆಸಿದ ಅತ್ತೆ,ಮಾವ ಹಾಗೂ ಸಂಭಂಧಿಕರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *