ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ…ವೃಷಣ ಅಮುಕಿ ಚಾಕುವಿನಿಂದ ಇರಿತ…7 ಮಂದಿ ವಿರುದ್ದ FIR ದಾಖಲು…

ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ…ವೃಷಣ ಅಮುಕಿ ಚಾಕುವಿನಿಂದ ಇರಿತ…7 ಮಂದಿ ವಿರುದ್ದ FIR ದಾಖಲು…

ಮೈಸೂರು,ಜು5,Tv10 ಕನ್ನಡ

ಕೌಟುಂಬಿಕ ಕಲಹ ಹಿನ್ನಲೆ ಕೋಪಿಸಿಕೊಂಡು ತವರು ಮನೆಯಲ್ಲಿದ್ದ ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ ನಡೆಸಿ ವೃಷಣ ಗಾಯಗೊಳಿಸಿ ಚಾಕುವಿನಿಂದ ಇರಿದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬೋಗಾದಿ ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ಅಳಿಯ ಸುಜಿತ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಭಂಧ ಅತ್ತೆ ಉಮಾ,ಮಾವ ಲೋಕೇಶ್,ಭಾವಮೈದ ದೇವರಾಜ್,ಚಿಕ್ಕಮಾವ ಅಜಯ್,ಉಮಾ ರವರ ಅಕ್ಕಂದಿರಾದ ಸೌಭಾಗ್ಯ,ಮಂಜುಳಾ ಹಾಗೂ ಸ್ನೇಹಿತೆ ಮಮತಾ ಎಂಬುವರ ಮೇಲೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಜಿತ್ ಹಾಗೂ ನಿಖಿತಾ ಪರಸ್ಪರ ಪ್ರೀತಿಸಿ ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದರು.ಸಣ್ಣಪುಟ್ಟ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು.ನಿಖಿತಾಗೆ ಅನಾರೋಗ್ಯ ಹಿನ್ನಲೆ ತವರು ಮನೆ ಸೇರಿದ್ದಳು.ಸುಮಾರು ಒಂದು ತಿಂಗಳಾದರೂ ಮನೆಗೆ ಹಿಂದಿರುಗಲಿಲ್ಲ.ಹೀಗಾಗಿ ಪತ್ನಿಯನ್ನ ಕರೆತರಲು ಸುಜಿತ್ ಬೋಗಾದಿ ಗ್ರಾಮಕ್ಕೆ ತಮ್ಮ ಸಹೋದರನ ಜೊತೆ ತೆರಳಿದ್ದಾರೆ.ಈ ವೇಳೆ ಕ್ಯಾತೆ ತೆಗೆದ ಅತ್ತೆ,ಮಾವ ಹಾಗೂ ಸಂಭಂಧಿಕರು ಸುಜಿತ್ ಮೇಲೆ ಹಲ್ಲೆ ಮಾಡಿದ್ದಾರೆ.ಉಮಾ ರವರ ಅಕ್ಕಂದಿರು ಸುಜಿತ್ ರವರ ವೃಷಣ ಅಮುಕಿ ಗಾಯಗೊಳಿಸಿದ್ದಾರೆ.ದೇವರಾಜು ಚಾಕುವಿನಿಂದ ಇರಿದಿದ್ದಾನೆ.ಈ ವೇಳೆ ಅಕ್ಕಪಕ್ಕದ ಮನೆಯವರು ಜಗಳ ಬಿಡಿಸಿದ್ದಾರೆ.ಗಾಯಗೊಂಡ ಸುಜಿತ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ನಡೆಸಿದ ಅತ್ತೆ,ಮಾವ ಹಾಗೂ ಸಂಭಂಧಿಕರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *