ಯೋಗಪಟುಗಳಿಂದ ಪರಿಸರ ಕಾಳಜಿ…ಚಾಮುಂಡಿತಾಯಿ ಮಡಿಲಿನಲ್ಲಿ 20 ಲಕ್ಷ ಬೀಜ ಹಾಕಿ ಕಾರ್ಯಕ್ರಮ…

ಯೋಗಪಟುಗಳಿಂದ ಪರಿಸರ ಕಾಳಜಿ…ಚಾಮುಂಡಿತಾಯಿ ಮಡಿಲಿನಲ್ಲಿ 20 ಲಕ್ಷ ಬೀಜ ಹಾಕಿ ಕಾರ್ಯಕ್ರಮ…

ಮೈಸೂರು,ಜು7,Tv10 ಕನ್ನಡ

ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಯೋಗ ತರಗತಿಗಳು ನಡೆಸುವ

ಪ್ರಣವ ಯೋಗ ಮತ್ತು ಆಧ್ಯಾತ್ಮಿಕ ಕೇಂದ್ರದ ಯೋಗ ಪಟುಗಳು ಇಂದು ಪರಿಸರ

ಕಾಳಜಿಯನ್ನ ಪ್ರದರ್ಶಿಸಿದ್ದಾರೆ.ಆರೋಗ್ಯಕ್ಕೆ ಯೋಗ ಹೇಗೆ ಮುಖ್ಯವೋ ಹಾಗೇ ಪರಿಸರ ಸಂರಕ್ಷಣೆಯೂ ಆರೋಗ್ಯಕ್ಕೆ ಪ್ರಾಮುಖ್ಯ ಎಂದು ಸಾಬೀತು ಪಡಿಸಿದ್ದಾರೆ.ಚಾಮುಂಡಿ ತಾಯಿ ನೆಲೆಸಿರುವ ಕ್ಷೇತ್ರದ ಅರಣ್ಯ ಪ್ರದೇಶದಲ್ಲಿ ಕಾಲ್ನಡಿಗೆಯಲ್ಲಿ ಸಾಗಿದ ಯೋಗಪಟುಗಳು ಹೊಂಗೆ,ಹುಣಸೆ,ಬೇವು ಮರಗಳ ಸುಮಾರು 20 ಲಕ್ಷ ಬೀಜಗಳನ್ನ ಹಾಕಿ ಪರಿಸರ ಕಾಳಜಿ ಮೆರೆದಿದ್ದಾರೆ.ಪ್ರಣವ ಯೋಗ ಕೇಂದ್ರದ ಸಂಸ್ಥಾಪಕರಾದ ಶ್ರೀಧರ್ ಗುರೂಜಿ ಮಾರ್ಗದರ್ಶನದಲ್ಲಿ ಸುಮಾರು 30 ಕ್ಕೂ ಹೆಚ್ಚು ಯೋಗಪಟುಗಳು ನಂದಿ ವರೆಗೆ ಕಾಲ್ನಡಿಗೆಯಲ್ಲಿ ತೆರಳಿ ರಸ್ತೆಯ ಇಕ್ಕೆಲಗಳಲ್ಲಿ ಮರಗಳ ಬೀಜಗಳನ್ನ ಹಾಕುವ ಮೂಲಕ ವೃಕ್ಷಗಳ ಅಭಿವೃದ್ದಿಗೆ ಸಂಕಲ್ಪ ತೊಟ್ಟಿದ್ದಾರೆ.ಪ್ರತಿವರ್ಷ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುವ ಶ್ರೀಧರ ಗುರೂಜಿ ರವರು ಈ ವರ್ಷವೂ ಸಹ ತಮ್ಮ ಶಿಷ್ಯಂದಿರ ಜೊತೆ ಸೇರಿ ಪರಿಸರ ಉಳಿವಿಗಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಯೋಗದ ಮೂಲಕ ಆರೋಗ್ಯ ಭಾಗ್ಯ ಕಲ್ಪಿಸುವ ಶ್ರೀಧರ ಗುರೂಜಿಯವರು ಪರಿಸರ ಉಳಿವೂ ನಮ್ಮ ಜವಾಬ್ದಾರಿ ಎಂಬ ಸಂದೇಶವನ್ನ ಈ ಕಾರ್ಯಕ್ರಮದ ಮೂಲಕ ಸಾರಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *