
ಚಂಪಾಕಲಿ,ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ…ಬೇಕರಿ ನೌಕರನಿಗೆ ಚಾಕು ಇರಿತ…
- CrimeMysoreNews
- July 7, 2024
- No Comment
- 445
ಮೈಸೂರು,ಜು7,Tv10 ಕನ್ನಡ
ಚಂಪಾಕಲಿ ಹಾಗೂ ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ ಮಾಡಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದ ಘಟನೆ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ.ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುವ ಮಹಮದ್ ಸಾಜಿದ್ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ರೌಡಿಶೀಟರ್ ಪ್ರಜ್ವಲ್@ಸ್ಪಾಟ್ ಹಾಗೂ ಸಂಜು ಎಂಬುವರು ದಾಂಧಲೆ ನಡೆಸಿದ ಆರೋಪಿಗಳು.
ರಾತ್ರಿ ಸುಮಾರು 10 ಗಂಟೆ ವೇಳೆಯಲ್ಲಿ ಬೇಕರಿಗೆ ಬಂದ ಪ್ರಜ್ವಲ್ ಹಾಗೂ ಸಂಜು ಚೆಂಪಾಕಲಿ ಹಾಗೂ ಪಪ್ಸ್ ತಿಂದಿದ್ದಾರೆ.ಹಣ ಕೇಳಿದಾಗ ಟ್ರೇಗಳನ್ನ ತಳ್ಳಿ ಪದಾರ್ಥಗಳನ್ನ ಬೀಳಿಸಿ ರೌಡಿಸಂ ಪ್ರದರ್ಶಿಸಿ ಮಹಮದ್ ಸಾಜಿದ್ ಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಸ್ವೆಟರ್ ಧರಿಸಿದ್ದರಿಂದ ಚಾಕು ಸಿಲುಕಿಕೊಂಡಿದೆ.ನಂತರ ಮಹಮದ್ ಸಾಜಿದ್ ಧರಿಸಿದ್ದ 30 ಗ್ರಾಂ ಚಿನ್ನದ ಸರ ಲಪಟಾಯಿಸಿ ಪ್ರಜ್ವಲ್ ಹಾಗೂ ಸಂಜು ಪರಾರಿಯಾಗಿದ್ದಾರೆ.ಪ್ರಜ್ವಲ್ ಹಾಗೂ ಸಂಜು ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಜು ಅರೆಸ್ಟ್ ಆಗಿದ್ದು ಪ್ರಜ್ವಲ್ ತಲೆಮರೆಸಿಕೊಂಡಿದ್ದಾನೆ…