ಚಂಪಾಕಲಿ,ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ…ಬೇಕರಿ ನೌಕರನಿಗೆ ಚಾಕು ಇರಿತ…

ಚಂಪಾಕಲಿ,ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ…ಬೇಕರಿ ನೌಕರನಿಗೆ ಚಾಕು ಇರಿತ…

ಮೈಸೂರು,ಜು7,Tv10 ಕನ್ನಡ

ಚಂಪಾಕಲಿ ಹಾಗೂ ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ ಮಾಡಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದ ಘಟನೆ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ.ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುವ ಮಹಮದ್ ಸಾಜಿದ್ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ರೌಡಿಶೀಟರ್ ಪ್ರಜ್ವಲ್@ಸ್ಪಾಟ್ ಹಾಗೂ ಸಂಜು ಎಂಬುವರು ದಾಂಧಲೆ ನಡೆಸಿದ ಆರೋಪಿಗಳು.
ರಾತ್ರಿ ಸುಮಾರು 10 ಗಂಟೆ ವೇಳೆಯಲ್ಲಿ ಬೇಕರಿಗೆ ಬಂದ ಪ್ರಜ್ವಲ್ ಹಾಗೂ ಸಂಜು ಚೆಂಪಾಕಲಿ ಹಾಗೂ ಪಪ್ಸ್ ತಿಂದಿದ್ದಾರೆ.ಹಣ ಕೇಳಿದಾಗ ಟ್ರೇಗಳನ್ನ ತಳ್ಳಿ ಪದಾರ್ಥಗಳನ್ನ ಬೀಳಿಸಿ ರೌಡಿಸಂ ಪ್ರದರ್ಶಿಸಿ ಮಹಮದ್ ಸಾಜಿದ್ ಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಸ್ವೆಟರ್ ಧರಿಸಿದ್ದರಿಂದ ಚಾಕು ಸಿಲುಕಿಕೊಂಡಿದೆ.ನಂತರ ಮಹಮದ್ ಸಾಜಿದ್ ಧರಿಸಿದ್ದ 30 ಗ್ರಾಂ ಚಿನ್ನದ ಸರ ಲಪಟಾಯಿಸಿ ಪ್ರಜ್ವಲ್ ಹಾಗೂ ಸಂಜು ಪರಾರಿಯಾಗಿದ್ದಾರೆ.ಪ್ರಜ್ವಲ್ ಹಾಗೂ ಸಂಜು ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಜು ಅರೆಸ್ಟ್ ಆಗಿದ್ದು ಪ್ರಜ್ವಲ್ ತಲೆಮರೆಸಿಕೊಂಡಿದ್ದಾನೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *