ಚಂಪಾಕಲಿ,ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ…ಬೇಕರಿ ನೌಕರನಿಗೆ ಚಾಕು ಇರಿತ…

ಚಂಪಾಕಲಿ,ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ…ಬೇಕರಿ ನೌಕರನಿಗೆ ಚಾಕು ಇರಿತ…

ಮೈಸೂರು,ಜು7,Tv10 ಕನ್ನಡ

ಚಂಪಾಕಲಿ ಹಾಗೂ ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ ಮಾಡಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದ ಘಟನೆ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ.ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುವ ಮಹಮದ್ ಸಾಜಿದ್ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ರೌಡಿಶೀಟರ್ ಪ್ರಜ್ವಲ್@ಸ್ಪಾಟ್ ಹಾಗೂ ಸಂಜು ಎಂಬುವರು ದಾಂಧಲೆ ನಡೆಸಿದ ಆರೋಪಿಗಳು.
ರಾತ್ರಿ ಸುಮಾರು 10 ಗಂಟೆ ವೇಳೆಯಲ್ಲಿ ಬೇಕರಿಗೆ ಬಂದ ಪ್ರಜ್ವಲ್ ಹಾಗೂ ಸಂಜು ಚೆಂಪಾಕಲಿ ಹಾಗೂ ಪಪ್ಸ್ ತಿಂದಿದ್ದಾರೆ.ಹಣ ಕೇಳಿದಾಗ ಟ್ರೇಗಳನ್ನ ತಳ್ಳಿ ಪದಾರ್ಥಗಳನ್ನ ಬೀಳಿಸಿ ರೌಡಿಸಂ ಪ್ರದರ್ಶಿಸಿ ಮಹಮದ್ ಸಾಜಿದ್ ಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಸ್ವೆಟರ್ ಧರಿಸಿದ್ದರಿಂದ ಚಾಕು ಸಿಲುಕಿಕೊಂಡಿದೆ.ನಂತರ ಮಹಮದ್ ಸಾಜಿದ್ ಧರಿಸಿದ್ದ 30 ಗ್ರಾಂ ಚಿನ್ನದ ಸರ ಲಪಟಾಯಿಸಿ ಪ್ರಜ್ವಲ್ ಹಾಗೂ ಸಂಜು ಪರಾರಿಯಾಗಿದ್ದಾರೆ.ಪ್ರಜ್ವಲ್ ಹಾಗೂ ಸಂಜು ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಜು ಅರೆಸ್ಟ್ ಆಗಿದ್ದು ಪ್ರಜ್ವಲ್ ತಲೆಮರೆಸಿಕೊಂಡಿದ್ದಾನೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *