ಚಂಪಾಕಲಿ,ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ…ಬೇಕರಿ ನೌಕರನಿಗೆ ಚಾಕು ಇರಿತ…

ಚಂಪಾಕಲಿ,ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ…ಬೇಕರಿ ನೌಕರನಿಗೆ ಚಾಕು ಇರಿತ…

ಮೈಸೂರು,ಜು7,Tv10 ಕನ್ನಡ

ಚಂಪಾಕಲಿ ಹಾಗೂ ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ ಮಾಡಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದ ಘಟನೆ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ.ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುವ ಮಹಮದ್ ಸಾಜಿದ್ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ರೌಡಿಶೀಟರ್ ಪ್ರಜ್ವಲ್@ಸ್ಪಾಟ್ ಹಾಗೂ ಸಂಜು ಎಂಬುವರು ದಾಂಧಲೆ ನಡೆಸಿದ ಆರೋಪಿಗಳು.
ರಾತ್ರಿ ಸುಮಾರು 10 ಗಂಟೆ ವೇಳೆಯಲ್ಲಿ ಬೇಕರಿಗೆ ಬಂದ ಪ್ರಜ್ವಲ್ ಹಾಗೂ ಸಂಜು ಚೆಂಪಾಕಲಿ ಹಾಗೂ ಪಪ್ಸ್ ತಿಂದಿದ್ದಾರೆ.ಹಣ ಕೇಳಿದಾಗ ಟ್ರೇಗಳನ್ನ ತಳ್ಳಿ ಪದಾರ್ಥಗಳನ್ನ ಬೀಳಿಸಿ ರೌಡಿಸಂ ಪ್ರದರ್ಶಿಸಿ ಮಹಮದ್ ಸಾಜಿದ್ ಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಸ್ವೆಟರ್ ಧರಿಸಿದ್ದರಿಂದ ಚಾಕು ಸಿಲುಕಿಕೊಂಡಿದೆ.ನಂತರ ಮಹಮದ್ ಸಾಜಿದ್ ಧರಿಸಿದ್ದ 30 ಗ್ರಾಂ ಚಿನ್ನದ ಸರ ಲಪಟಾಯಿಸಿ ಪ್ರಜ್ವಲ್ ಹಾಗೂ ಸಂಜು ಪರಾರಿಯಾಗಿದ್ದಾರೆ.ಪ್ರಜ್ವಲ್ ಹಾಗೂ ಸಂಜು ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಜು ಅರೆಸ್ಟ್ ಆಗಿದ್ದು ಪ್ರಜ್ವಲ್ ತಲೆಮರೆಸಿಕೊಂಡಿದ್ದಾನೆ…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *