ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆಯಾದ ಸಿಎ ನಿವೇಶನ…ಅಪಾಯಕ್ಕೆ ಆಜ್ವಾನ ನೀಡುತ್ತಿರುವ ಭಾರಿ ವಾಹನಗಳು…

ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆಯಾದ ಸಿಎ ನಿವೇಶನ…ಅಪಾಯಕ್ಕೆ ಆಜ್ವಾನ ನೀಡುತ್ತಿರುವ ಭಾರಿ ವಾಹನಗಳು…

ಮೈಸೂರು,ಜು9,Tv10 ಕನ್ನಡಸರ್ಕಾರಿ ಜಾಗಗಳು,ನಿವೇಶನಗಳುದುರ್ಬಳಕೆ ಆಗುತ್ತಿದೆ ಎಂಬ ಆರೋಪಗಳ ಬೆನ್ನ ಹಿಂದೆಯೇ ಸಿಎ ನಿವೇಶನವೊಂದು ಭಾರಿ ವಾಹನಗಳ ನಿಲುಗಡೆಗೆ ಆಸರೆ ನೀಡಿದೆ.ಪ್ರತಿಷ್ಟಿತ ಬಡಾವಣೆಯಲ್ಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನಪಾಲಿಸಬೇಕಾದ ಪೊಲೀಸ್ ಠಾಣೆಯ ಸಮೀಪದಲ್ಲೇ ಇಂತಹ ಬೆಳವಣಿಗೆ ಕಂಡು ಬರುತ್ತಿದ್ದರೂ ಯಾವುದೇ ಅಧಿಕಾರಿಯಾಗಲಿ ಅಥವಾ ಜನಪ್ರತಿನಿಧಿಯಾಗಲಿ ಈ ಬಗ್ಗೆ ತಲೆ ಕೆಡಿಸಿಕೊಳ್ಳದಿರುವುದು ವಿಷಾಧನೀಯ.ಹೆಬ್ಬಾಳ್ ಬಡಾವಣೆ ವಾರ್ಡ್ ನಂ 5 ರಲ್ಲಿರುವ ಹೆಬ್ಬಾಳ್ ಪೊಲೀಸ್ ಠಾಣೆ ಸಮೀಪ ಕುವೆಂಪುವೃತ್ತದ ಬಳಿ ಸಿಎ ನಿವೇಶನ ಖಾಲಿ ಬಿದ್ದಿದೆ.ಪಾಲಿಕೆ ಅಧಿಕಾರಿಯಾಗಲಿ ಅಥವಾ ಮುಡಾ ಅಧಿಕಾರಿಗಳಾಗಲಿ ಸದರಿ ನಿವೇಶನ ಸಂರಕ್ಷಣೆಗೆ ಯಾವುದೇ ಕ್ರಮಕೈಗೊಂಡಿಲ್ಲ.ಇದನ್ನೇ ದುರುಪಯೋಗ ಮಾಡಿಕೊಂಡ ಭಾರಿ ವಾಹನಗಳನ್ನ ಚಾಲಕರು ರಾಜಾರೋಷವಾಗಿ ಎಲ್ಲೆಂದರಲ್ಲಿ ಪಾರ್ಕ್ ಮಾಡಿದ್ದಾರೆ.ಕೆಲವು ವಾಹನಗಳಂತೂ ರಸ್ತೆಯನ್ನೇ ಆಕ್ರಮಿಸಿಕೊಂಡಿವೆ.ಮತ್ತೆ ಕೆಲವುವಾಹನಗಳು ಹೆಬ್ಬಾಳ್ ಠಾಣೆಗೆ ಹೊಂದಿಕೊಂಡಂತಿರುವ ಕಾಂಪೌಂಡ್ ಒಳಗೇ ನಿಂತಿವೆ.ರಸ್ತೆ ಆಕ್ರಮಿಸಿಕೊಂಡಿರುವ ವಾಹನಗಳಂತೂ ಅಪಾಯಕ್ಕೆ ಆಹ್ವಾನ ನೀಡುತ್ತಿವೆ.ಅನಾಹುತ ಸಂಭವಿಸುವ ಮುನ್ನ ಸಂಭಂಧಪಟ್ಟ ಅಧಿಕಾರಿಗಳು ಟ್ರಕ್ ಟರ್ಮಿನಲ್ ನಂತೆ ಪರಿವರ್ತನೆ ಆಗಿರುವ ಸದರಿ ಸ್ಥಳಕ್ಕೆ ಬೇಲಿ ಹಾಕಿ ಸಂರಕ್ಷಿಸುವರೇ…?

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *