ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆಯಾದ ಸಿಎ ನಿವೇಶನ…ಅಪಾಯಕ್ಕೆ ಆಜ್ವಾನ ನೀಡುತ್ತಿರುವ ಭಾರಿ ವಾಹನಗಳು…

ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆಯಾದ ಸಿಎ ನಿವೇಶನ…ಅಪಾಯಕ್ಕೆ ಆಜ್ವಾನ ನೀಡುತ್ತಿರುವ ಭಾರಿ ವಾಹನಗಳು…

ಮೈಸೂರು,ಜು9,Tv10 ಕನ್ನಡಸರ್ಕಾರಿ ಜಾಗಗಳು,ನಿವೇಶನಗಳುದುರ್ಬಳಕೆ ಆಗುತ್ತಿದೆ ಎಂಬ ಆರೋಪಗಳ ಬೆನ್ನ ಹಿಂದೆಯೇ ಸಿಎ ನಿವೇಶನವೊಂದು ಭಾರಿ ವಾಹನಗಳ ನಿಲುಗಡೆಗೆ ಆಸರೆ ನೀಡಿದೆ.ಪ್ರತಿಷ್ಟಿತ ಬಡಾವಣೆಯಲ್ಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನಪಾಲಿಸಬೇಕಾದ ಪೊಲೀಸ್ ಠಾಣೆಯ ಸಮೀಪದಲ್ಲೇ ಇಂತಹ ಬೆಳವಣಿಗೆ ಕಂಡು ಬರುತ್ತಿದ್ದರೂ ಯಾವುದೇ ಅಧಿಕಾರಿಯಾಗಲಿ ಅಥವಾ ಜನಪ್ರತಿನಿಧಿಯಾಗಲಿ ಈ ಬಗ್ಗೆ ತಲೆ ಕೆಡಿಸಿಕೊಳ್ಳದಿರುವುದು ವಿಷಾಧನೀಯ.ಹೆಬ್ಬಾಳ್ ಬಡಾವಣೆ ವಾರ್ಡ್ ನಂ 5 ರಲ್ಲಿರುವ ಹೆಬ್ಬಾಳ್ ಪೊಲೀಸ್ ಠಾಣೆ ಸಮೀಪ ಕುವೆಂಪುವೃತ್ತದ ಬಳಿ ಸಿಎ ನಿವೇಶನ ಖಾಲಿ ಬಿದ್ದಿದೆ.ಪಾಲಿಕೆ ಅಧಿಕಾರಿಯಾಗಲಿ ಅಥವಾ ಮುಡಾ ಅಧಿಕಾರಿಗಳಾಗಲಿ ಸದರಿ ನಿವೇಶನ ಸಂರಕ್ಷಣೆಗೆ ಯಾವುದೇ ಕ್ರಮಕೈಗೊಂಡಿಲ್ಲ.ಇದನ್ನೇ ದುರುಪಯೋಗ ಮಾಡಿಕೊಂಡ ಭಾರಿ ವಾಹನಗಳನ್ನ ಚಾಲಕರು ರಾಜಾರೋಷವಾಗಿ ಎಲ್ಲೆಂದರಲ್ಲಿ ಪಾರ್ಕ್ ಮಾಡಿದ್ದಾರೆ.ಕೆಲವು ವಾಹನಗಳಂತೂ ರಸ್ತೆಯನ್ನೇ ಆಕ್ರಮಿಸಿಕೊಂಡಿವೆ.ಮತ್ತೆ ಕೆಲವುವಾಹನಗಳು ಹೆಬ್ಬಾಳ್ ಠಾಣೆಗೆ ಹೊಂದಿಕೊಂಡಂತಿರುವ ಕಾಂಪೌಂಡ್ ಒಳಗೇ ನಿಂತಿವೆ.ರಸ್ತೆ ಆಕ್ರಮಿಸಿಕೊಂಡಿರುವ ವಾಹನಗಳಂತೂ ಅಪಾಯಕ್ಕೆ ಆಹ್ವಾನ ನೀಡುತ್ತಿವೆ.ಅನಾಹುತ ಸಂಭವಿಸುವ ಮುನ್ನ ಸಂಭಂಧಪಟ್ಟ ಅಧಿಕಾರಿಗಳು ಟ್ರಕ್ ಟರ್ಮಿನಲ್ ನಂತೆ ಪರಿವರ್ತನೆ ಆಗಿರುವ ಸದರಿ ಸ್ಥಳಕ್ಕೆ ಬೇಲಿ ಹಾಕಿ ಸಂರಕ್ಷಿಸುವರೇ…?

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *