ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೈಸೂರು,ಜು11,Tv10 ಕನ್ನಡಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ ತಯಾರಾಗಿದೆ.ಪ್ರತಿ ವರ್ಷ ಆಷಾಢ ಮಾಸದ ಮೊದಲ ಶುಕ್ರವಾರದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ 100 ಅಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ 25000 ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ.ಅಲ್ಲದೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅನ್ನ ಸಂತರ್ಪಣೆಯ ಜೊತೆಗೆ ಮೈಸೂರು ಪಾಕ್ ವಿತರಿಸಲಾಗುತ್ತದೆ. ಹೀಗಾಗಿ ಇಂದು ನಿತ್ಯಾನಂದ ಕಲ್ಯಾಣ ಮಂಟಪದಲ್ಲಿಮೈಸೂರುಪಾಕ್ ತಯಾರಿಸಿಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ತನಕ ಟಿಫನ್ ಇರುತ್ತದೆ. ಪೊಂಗಲ್, ಇಡ್ಲಿ, ಚಟ್ನಿಯನ್ನು ಭಕ್ತಾಧಿಗಳಿಗೆ ನೀಡಲಾಗುತ್ತದೆ. ಹನ್ನೊಂದು ಗಂಟೆಯ ನಂತರ ಊಟವನ್ನು ಪ್ರಾರಂಭಿಸಲಾಗುತ್ತದೆ. ಊಟಕ್ಕೆ ಪಲ್ಯ, ಕೋಸಂಬರಿ ಚಟ್ನಿ, ಬಿಸಿಬೇಳೆ ಬಾತ್, ಅನ್ನ, ಸಾಂಬಾರ್, ಮೊಸರು, ಲಾಡುಮೈಸೂರುಪಾಕು ಉಣ ಬಡಿಡಿಸಲಾಗುತ್ತದೆ‌. ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ರ ತನಕ ಪ್ರಸಾದ ವಿತರಿಸಲಾಗುತ್ತದೆ. ಭಕ್ತಾದಿಗಳೆಲ್ಲರಿಗೂ ಬಾಳೆ ಎಲೆಯಲ್ಲಿ ಊಟವನ್ನು ಹಾಕಲಾಗುತ್ತದೆ ಎಂದು ಚಾಮುಂಡೇಶ್ವರಿ ಸೇವಾ ಸಮಿತಿಯ ಸದಸ್ಯರುಗಳಾದ ಅರುಣ್ ಹಾಗೂ ನಾಗೇಶ್ ತಿಳಿಸಿದ್ದಾರೆ. ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ 25000 ಮೈಸೂರುಪಾಕುಗಳನ್ನು ತಯಾರಿಸಲಾಗಿದೆ. ಇದಕ್ಕಾಗಿ 200 ಕೆಜಿ ಕಡಲೆ ಹಿಟ್ಟು, 500 ಕೆಜಿ ಸಕ್ಕರೆ, 30 ಕೆಜಿ ರಿಫೈಂಡ್ ಆಯಿಲ್, ನೂರು ಕೆಜಿ ಡಾಲ್ಡಾ ತುಪ್ಪ, ನೂರು ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, 3 ಕೆಜಿ ಏಲಕ್ಕಿ, 2 ಕೆಜಿ ಅರಿಶಿನ ಪುಡಿ ಮೊದಲಾದ ಸಾಮಗ್ರಿಗಳನ್ನು ಬಳಸಿಕೊಳ್ಳಲಾಗಿದೆ. 40 ಜನ ನುರಿತ ಬಾಣಸಿಗರಿಂದ 25,000 ಮೈಸೂರುಪಾಕ್ ಅನ್ನು ತಯಾರಿಸಲಾಗಿದೆ…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *