ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೈಸೂರು,ಜು11,Tv10 ಕನ್ನಡಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ ತಯಾರಾಗಿದೆ.ಪ್ರತಿ ವರ್ಷ ಆಷಾಢ ಮಾಸದ ಮೊದಲ ಶುಕ್ರವಾರದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ 100 ಅಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ 25000 ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ.ಅಲ್ಲದೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅನ್ನ ಸಂತರ್ಪಣೆಯ ಜೊತೆಗೆ ಮೈಸೂರು ಪಾಕ್ ವಿತರಿಸಲಾಗುತ್ತದೆ. ಹೀಗಾಗಿ ಇಂದು ನಿತ್ಯಾನಂದ ಕಲ್ಯಾಣ ಮಂಟಪದಲ್ಲಿಮೈಸೂರುಪಾಕ್ ತಯಾರಿಸಿಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ತನಕ ಟಿಫನ್ ಇರುತ್ತದೆ. ಪೊಂಗಲ್, ಇಡ್ಲಿ, ಚಟ್ನಿಯನ್ನು ಭಕ್ತಾಧಿಗಳಿಗೆ ನೀಡಲಾಗುತ್ತದೆ. ಹನ್ನೊಂದು ಗಂಟೆಯ ನಂತರ ಊಟವನ್ನು ಪ್ರಾರಂಭಿಸಲಾಗುತ್ತದೆ. ಊಟಕ್ಕೆ ಪಲ್ಯ, ಕೋಸಂಬರಿ ಚಟ್ನಿ, ಬಿಸಿಬೇಳೆ ಬಾತ್, ಅನ್ನ, ಸಾಂಬಾರ್, ಮೊಸರು, ಲಾಡುಮೈಸೂರುಪಾಕು ಉಣ ಬಡಿಡಿಸಲಾಗುತ್ತದೆ‌. ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ರ ತನಕ ಪ್ರಸಾದ ವಿತರಿಸಲಾಗುತ್ತದೆ. ಭಕ್ತಾದಿಗಳೆಲ್ಲರಿಗೂ ಬಾಳೆ ಎಲೆಯಲ್ಲಿ ಊಟವನ್ನು ಹಾಕಲಾಗುತ್ತದೆ ಎಂದು ಚಾಮುಂಡೇಶ್ವರಿ ಸೇವಾ ಸಮಿತಿಯ ಸದಸ್ಯರುಗಳಾದ ಅರುಣ್ ಹಾಗೂ ನಾಗೇಶ್ ತಿಳಿಸಿದ್ದಾರೆ. ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ 25000 ಮೈಸೂರುಪಾಕುಗಳನ್ನು ತಯಾರಿಸಲಾಗಿದೆ. ಇದಕ್ಕಾಗಿ 200 ಕೆಜಿ ಕಡಲೆ ಹಿಟ್ಟು, 500 ಕೆಜಿ ಸಕ್ಕರೆ, 30 ಕೆಜಿ ರಿಫೈಂಡ್ ಆಯಿಲ್, ನೂರು ಕೆಜಿ ಡಾಲ್ಡಾ ತುಪ್ಪ, ನೂರು ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, 3 ಕೆಜಿ ಏಲಕ್ಕಿ, 2 ಕೆಜಿ ಅರಿಶಿನ ಪುಡಿ ಮೊದಲಾದ ಸಾಮಗ್ರಿಗಳನ್ನು ಬಳಸಿಕೊಳ್ಳಲಾಗಿದೆ. 40 ಜನ ನುರಿತ ಬಾಣಸಿಗರಿಂದ 25,000 ಮೈಸೂರುಪಾಕ್ ಅನ್ನು ತಯಾರಿಸಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *