ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೈಸೂರು,ಜು11,Tv10 ಕನ್ನಡಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ ತಯಾರಾಗಿದೆ.ಪ್ರತಿ ವರ್ಷ ಆಷಾಢ ಮಾಸದ ಮೊದಲ ಶುಕ್ರವಾರದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ 100 ಅಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ 25000 ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ.ಅಲ್ಲದೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅನ್ನ ಸಂತರ್ಪಣೆಯ ಜೊತೆಗೆ ಮೈಸೂರು ಪಾಕ್ ವಿತರಿಸಲಾಗುತ್ತದೆ. ಹೀಗಾಗಿ ಇಂದು ನಿತ್ಯಾನಂದ ಕಲ್ಯಾಣ ಮಂಟಪದಲ್ಲಿಮೈಸೂರುಪಾಕ್ ತಯಾರಿಸಿಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ತನಕ ಟಿಫನ್ ಇರುತ್ತದೆ. ಪೊಂಗಲ್, ಇಡ್ಲಿ, ಚಟ್ನಿಯನ್ನು ಭಕ್ತಾಧಿಗಳಿಗೆ ನೀಡಲಾಗುತ್ತದೆ. ಹನ್ನೊಂದು ಗಂಟೆಯ ನಂತರ ಊಟವನ್ನು ಪ್ರಾರಂಭಿಸಲಾಗುತ್ತದೆ. ಊಟಕ್ಕೆ ಪಲ್ಯ, ಕೋಸಂಬರಿ ಚಟ್ನಿ, ಬಿಸಿಬೇಳೆ ಬಾತ್, ಅನ್ನ, ಸಾಂಬಾರ್, ಮೊಸರು, ಲಾಡುಮೈಸೂರುಪಾಕು ಉಣ ಬಡಿಡಿಸಲಾಗುತ್ತದೆ‌. ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ರ ತನಕ ಪ್ರಸಾದ ವಿತರಿಸಲಾಗುತ್ತದೆ. ಭಕ್ತಾದಿಗಳೆಲ್ಲರಿಗೂ ಬಾಳೆ ಎಲೆಯಲ್ಲಿ ಊಟವನ್ನು ಹಾಕಲಾಗುತ್ತದೆ ಎಂದು ಚಾಮುಂಡೇಶ್ವರಿ ಸೇವಾ ಸಮಿತಿಯ ಸದಸ್ಯರುಗಳಾದ ಅರುಣ್ ಹಾಗೂ ನಾಗೇಶ್ ತಿಳಿಸಿದ್ದಾರೆ. ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ 25000 ಮೈಸೂರುಪಾಕುಗಳನ್ನು ತಯಾರಿಸಲಾಗಿದೆ. ಇದಕ್ಕಾಗಿ 200 ಕೆಜಿ ಕಡಲೆ ಹಿಟ್ಟು, 500 ಕೆಜಿ ಸಕ್ಕರೆ, 30 ಕೆಜಿ ರಿಫೈಂಡ್ ಆಯಿಲ್, ನೂರು ಕೆಜಿ ಡಾಲ್ಡಾ ತುಪ್ಪ, ನೂರು ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, 3 ಕೆಜಿ ಏಲಕ್ಕಿ, 2 ಕೆಜಿ ಅರಿಶಿನ ಪುಡಿ ಮೊದಲಾದ ಸಾಮಗ್ರಿಗಳನ್ನು ಬಳಸಿಕೊಳ್ಳಲಾಗಿದೆ. 40 ಜನ ನುರಿತ ಬಾಣಸಿಗರಿಂದ 25,000 ಮೈಸೂರುಪಾಕ್ ಅನ್ನು ತಯಾರಿಸಲಾಗಿದೆ…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *