ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೈಸೂರು,ಜು11,Tv10 ಕನ್ನಡಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ ತಯಾರಾಗಿದೆ.ಪ್ರತಿ ವರ್ಷ ಆಷಾಢ ಮಾಸದ ಮೊದಲ ಶುಕ್ರವಾರದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ 100 ಅಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ 25000 ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ.ಅಲ್ಲದೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅನ್ನ ಸಂತರ್ಪಣೆಯ ಜೊತೆಗೆ ಮೈಸೂರು ಪಾಕ್ ವಿತರಿಸಲಾಗುತ್ತದೆ. ಹೀಗಾಗಿ ಇಂದು ನಿತ್ಯಾನಂದ ಕಲ್ಯಾಣ ಮಂಟಪದಲ್ಲಿಮೈಸೂರುಪಾಕ್ ತಯಾರಿಸಿಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ತನಕ ಟಿಫನ್ ಇರುತ್ತದೆ. ಪೊಂಗಲ್, ಇಡ್ಲಿ, ಚಟ್ನಿಯನ್ನು ಭಕ್ತಾಧಿಗಳಿಗೆ ನೀಡಲಾಗುತ್ತದೆ. ಹನ್ನೊಂದು ಗಂಟೆಯ ನಂತರ ಊಟವನ್ನು ಪ್ರಾರಂಭಿಸಲಾಗುತ್ತದೆ. ಊಟಕ್ಕೆ ಪಲ್ಯ, ಕೋಸಂಬರಿ ಚಟ್ನಿ, ಬಿಸಿಬೇಳೆ ಬಾತ್, ಅನ್ನ, ಸಾಂಬಾರ್, ಮೊಸರು, ಲಾಡುಮೈಸೂರುಪಾಕು ಉಣ ಬಡಿಡಿಸಲಾಗುತ್ತದೆ‌. ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ರ ತನಕ ಪ್ರಸಾದ ವಿತರಿಸಲಾಗುತ್ತದೆ. ಭಕ್ತಾದಿಗಳೆಲ್ಲರಿಗೂ ಬಾಳೆ ಎಲೆಯಲ್ಲಿ ಊಟವನ್ನು ಹಾಕಲಾಗುತ್ತದೆ ಎಂದು ಚಾಮುಂಡೇಶ್ವರಿ ಸೇವಾ ಸಮಿತಿಯ ಸದಸ್ಯರುಗಳಾದ ಅರುಣ್ ಹಾಗೂ ನಾಗೇಶ್ ತಿಳಿಸಿದ್ದಾರೆ. ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ 25000 ಮೈಸೂರುಪಾಕುಗಳನ್ನು ತಯಾರಿಸಲಾಗಿದೆ. ಇದಕ್ಕಾಗಿ 200 ಕೆಜಿ ಕಡಲೆ ಹಿಟ್ಟು, 500 ಕೆಜಿ ಸಕ್ಕರೆ, 30 ಕೆಜಿ ರಿಫೈಂಡ್ ಆಯಿಲ್, ನೂರು ಕೆಜಿ ಡಾಲ್ಡಾ ತುಪ್ಪ, ನೂರು ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, 3 ಕೆಜಿ ಏಲಕ್ಕಿ, 2 ಕೆಜಿ ಅರಿಶಿನ ಪುಡಿ ಮೊದಲಾದ ಸಾಮಗ್ರಿಗಳನ್ನು ಬಳಸಿಕೊಳ್ಳಲಾಗಿದೆ. 40 ಜನ ನುರಿತ ಬಾಣಸಿಗರಿಂದ 25,000 ಮೈಸೂರುಪಾಕ್ ಅನ್ನು ತಯಾರಿಸಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *