ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೈಸೂರು,ಜು11,Tv10 ಕನ್ನಡಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ ತಯಾರಾಗಿದೆ.ಪ್ರತಿ ವರ್ಷ ಆಷಾಢ ಮಾಸದ ಮೊದಲ ಶುಕ್ರವಾರದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ 100 ಅಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ 25000 ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ.ಅಲ್ಲದೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅನ್ನ ಸಂತರ್ಪಣೆಯ ಜೊತೆಗೆ ಮೈಸೂರು ಪಾಕ್ ವಿತರಿಸಲಾಗುತ್ತದೆ. ಹೀಗಾಗಿ ಇಂದು ನಿತ್ಯಾನಂದ ಕಲ್ಯಾಣ ಮಂಟಪದಲ್ಲಿಮೈಸೂರುಪಾಕ್ ತಯಾರಿಸಿಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ತನಕ ಟಿಫನ್ ಇರುತ್ತದೆ. ಪೊಂಗಲ್, ಇಡ್ಲಿ, ಚಟ್ನಿಯನ್ನು ಭಕ್ತಾಧಿಗಳಿಗೆ ನೀಡಲಾಗುತ್ತದೆ. ಹನ್ನೊಂದು ಗಂಟೆಯ ನಂತರ ಊಟವನ್ನು ಪ್ರಾರಂಭಿಸಲಾಗುತ್ತದೆ. ಊಟಕ್ಕೆ ಪಲ್ಯ, ಕೋಸಂಬರಿ ಚಟ್ನಿ, ಬಿಸಿಬೇಳೆ ಬಾತ್, ಅನ್ನ, ಸಾಂಬಾರ್, ಮೊಸರು, ಲಾಡುಮೈಸೂರುಪಾಕು ಉಣ ಬಡಿಡಿಸಲಾಗುತ್ತದೆ‌. ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ರ ತನಕ ಪ್ರಸಾದ ವಿತರಿಸಲಾಗುತ್ತದೆ. ಭಕ್ತಾದಿಗಳೆಲ್ಲರಿಗೂ ಬಾಳೆ ಎಲೆಯಲ್ಲಿ ಊಟವನ್ನು ಹಾಕಲಾಗುತ್ತದೆ ಎಂದು ಚಾಮುಂಡೇಶ್ವರಿ ಸೇವಾ ಸಮಿತಿಯ ಸದಸ್ಯರುಗಳಾದ ಅರುಣ್ ಹಾಗೂ ನಾಗೇಶ್ ತಿಳಿಸಿದ್ದಾರೆ. ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ 25000 ಮೈಸೂರುಪಾಕುಗಳನ್ನು ತಯಾರಿಸಲಾಗಿದೆ. ಇದಕ್ಕಾಗಿ 200 ಕೆಜಿ ಕಡಲೆ ಹಿಟ್ಟು, 500 ಕೆಜಿ ಸಕ್ಕರೆ, 30 ಕೆಜಿ ರಿಫೈಂಡ್ ಆಯಿಲ್, ನೂರು ಕೆಜಿ ಡಾಲ್ಡಾ ತುಪ್ಪ, ನೂರು ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, 3 ಕೆಜಿ ಏಲಕ್ಕಿ, 2 ಕೆಜಿ ಅರಿಶಿನ ಪುಡಿ ಮೊದಲಾದ ಸಾಮಗ್ರಿಗಳನ್ನು ಬಳಸಿಕೊಳ್ಳಲಾಗಿದೆ. 40 ಜನ ನುರಿತ ಬಾಣಸಿಗರಿಂದ 25,000 ಮೈಸೂರುಪಾಕ್ ಅನ್ನು ತಯಾರಿಸಲಾಗಿದೆ…

Spread the love

Related post

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…

Leave a Reply

Your email address will not be published. Required fields are marked *