ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಅಂತಹವರ ವಿರುದ್ದ ದೂರುಗಳು ಬಂದಿದ್ದರೂ ವಿವರ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ತಿಳಿಸಿದ್ದಾರೆ.ಅಲ್ಲದೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾಮಟ್ಟದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವಂತೆ ಸಮನ್ವಯ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ಷಮತೆಯಲ್ಲಿ ಶಿಸ್ತು ಪಾಲಿಸಲು ಕ್ರಮ ಕೈಗೊಳ್ಳುವ ಮತ್ತು ನಿರ್ಲಕ್ಷ್ಯತೆ ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿ/ ಸಿಬ್ಬಂದಿವರ್ಗದಲ್ಲಿ ಅಸಮರ್ಥತೆ ಕಂಡುಬಂದರೆ ಅಂಥಹವರನ್ಮ ವರ್ಗಾವಣೆ ಮಾಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ…

Spread the love

Related post

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…
ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…

Leave a Reply

Your email address will not be published. Required fields are marked *