ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ.ಅಂತಹವರ ವಿರುದ್ದ ದೂರುಗಳು ಬಂದಿದ್ದರೂ ವಿವರ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ತಿಳಿಸಿದ್ದಾರೆ.ಅಲ್ಲದೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾಮಟ್ಟದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವಂತೆ ಸಮನ್ವಯ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿಗಳಿಗೆ/ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ಷಮತೆಯಲ್ಲಿ ಶಿಸ್ತು ಪಾಲಿಸಲು ಕ್ರಮ ಕೈಗೊಳ್ಳುವ ಮತ್ತು ನಿರ್ಲಕ್ಷ್ಯತೆ ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಅಧಿಕಾರಿ/ ಸಿಬ್ಬಂದಿವರ್ಗದಲ್ಲಿ ಅಸಮರ್ಥತೆ ಕಂಡುಬಂದರೆ ಅಂಥಹವರನ್ಮ ವರ್ಗಾವಣೆ ಮಾಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *