ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳುವು…ನಗದು ಚಿನ್ನಾಭರಣ ಸೇರಿ 2.34 ಲಕ್ಷ ದೋಚಿದ ಖದೀಮರು…

ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳುವು…ನಗದು ಚಿನ್ನಾಭರಣ ಸೇರಿ 2.34 ಲಕ್ಷ ದೋಚಿದ ಖದೀಮರು…

ಮೈಸೂರು,ಜು16,Tv10 ಕನ್ನಡಮೃತಪಟ್ಟ ತಾಯಿ ಅಂತ್ಯ ಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.ಮನೆ ಬಾಗಿಲ ಬೀಗ ಮುರಿದು ಚಿನ್ನಾಭರಣ ನಗದು ದೋಚಿಪರಾರಿಯಾಗಿದ್ದಾರೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಶ್ರೀ ನಗರದಲ್ಲಿ ಘಟನೆ ನಡೆದಿದೆ.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಬಸವರಾಜುಎಂಬುವರ ಮನೆಯಲ್ಲಿ ಖದೀಮರು ಕೃತ್ಯವೆಸಗಿದ್ದಾರೆ. 1.34 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದು ದೋಚಿದ್ದಾರೆ.ಬನ್ನೂರಿನಲ್ಲಿ ವಾಸವಿದ್ದ ತಾಯಿ ಮೃತಪಟ್ಟಿದ್ದಾರೆ.ತಾಯಿಯ ಅಂತಿಮ ದರುಶನ ಪಡೆದು ಅಂತ್ಯಸಂಸ್ಕಾರಕ್ಕಾಗಿ ಬಸವರಾಜ್ ಸಂಸಾರ ಸಮೇತ ಜುಲೈ 13 ರಂದು ತೆರಳಿದ್ದರು.ಜುಲೈ 14 ಕ್ಕೆ ಪತ್ನಿ ಹಾಗೂ ಮಗಳು ಹಿಂದಿರುಗಿದಾಗ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.ಈ ಸಂಭಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *