ವಿಶ್ವಹಾವುಗಳ ದಿನಾಚರಣೆ…ಉರಗತಜ್ಞ ಸ್ನೇಕ್ ಶ್ಯಾಂಗೆ ಅಭಿನಂದನೆ…

ವಿಶ್ವಹಾವುಗಳ ದಿನಾಚರಣೆ…ಉರಗತಜ್ಞ ಸ್ನೇಕ್ ಶ್ಯಾಂಗೆ ಅಭಿನಂದನೆ…

ಮೈಸೂರು,ಜು16,Tv10 ಕನ್ನಡವಿಶ್ವ ಹಾವು ಗಳ ದಿನಾಚರಣೆ ಅಂಗವಾಗಿ ಉರಗ ತಜ್ಞ ಸ್ನೇಕ್ ಶ್ಯಾಂ ಗೆ ಇಂದು ಅಭಿನಂದಿಸಿ ಗೌರವಿಸಲಾಯಿತು. 85000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿರುವ ಹೆಗ್ಗಳಿಕೆ ಉರುಗ ತಜ್ಞ ಸ್ನೇಕ್ ಶಾಮ್ ರವರದ್ದು.ಹೀಗಾಗಿ
ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ಲಕ್ಷ್ಮಿಪುರಂ ನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವು ಗಳ ದಿನಾಚರಣೆಯನ್ನ ಸ್ನೇಕ್ ಶ್ಯಾಂ ರವರನ್ನ ಅಭಿನಂದಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಸ್ನೇಕ್ ಶ್ಯಾಮ್
ಉರಗ ಸಂತತಿಯ ಉಳಿವು ಮುಖ್ಯ
ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವೂ ಮುಖ್ಯ ,ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಉಪಯುಕ್ತ ಸ್ಥಳದಲ್ಲಿಯೇ ಗಿಡಗಳನ್ನು ನೆಟ್ಟು ಬೆಳೆಸಬೇಕು. ಆ ಮೂಲಕ ಪರಿಸರವನ್ನು ಶುದ್ಧವಾಗಿಸುವ ಅಲ್ಪ ಸೇವೆಯನ್ನು ಮಾಡಿದಂತಾಗುತ್ತದೆ. ಪರಿಸರದಲ್ಲಿರುವ ಪ್ರತಿಯೊಂದು ಜೀವಿಯೂ ಒಂದನ್ನೊಂದು ಅವಲಂಬಿಸಿಯೇ ಬದುಕುವ ಕಾರಣ ಪ್ರತಿಯೊಂದಕ್ಕೂ ಪ್ರಾಮುಖ್ಯತೆಯಿದೆ. ಎಲ್ಲವನ್ನೂ ಗೌರವಿಸಿ ಎಂದು ಸಲಹೆ ನೀಡಿದರು.ಉರಗ ಪ್ರಭೇದಗಳು, ಅವುಗಳ ಸಂತತಿ, ಹಾವಿನ ಕಡಿತದ ಬಳಿಕ ನಡೆಸುವ ಪ್ರಥಮ ಚಿಕಿತ್ಸೆಗಳ ಕುರಿತು ಮಾಹಿತಿ ನೀಡಿದರು.ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ನಜರಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ ರಾಘವೇಂದ್ರ,ಪ್ರಕಾಶ್ ಪ್ರಿಯದರ್ಶನ್, ಪರಮೇಶ್ ಗೌಡ,
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಅಪೂರ್ವ ಸುರೇಶ್, ಬೈರತಿ ಲಿಂಗರಾಜು, ಸುಚಿಂದ್ರ, ಚಕ್ರಪಾಣಿ, ಎಸ್ ಎನ್ ರಾಜೇಶ್, ಸದಾಶಿವ್, ಸಚಿನ್ ನಾಯಕ್, ಸಫಿ, ರಾಕೇಶ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *