ಸಾಲ ವಸೂಲಿಗೆ ಯುವಕನ ಕಿಡ್ನಾಪ್…30 ಜನರ ತಂಡದಿಂದ ಕೃತ್ಯ ಆರೋಪ..7 ಮಂದಿ ಅರೆಸ್ಟ್…

ಸಾಲ ವಸೂಲಿಗೆ ಯುವಕನ ಕಿಡ್ನಾಪ್…30 ಜನರ ತಂಡದಿಂದ ಕೃತ್ಯ ಆರೋಪ..7 ಮಂದಿ ಅರೆಸ್ಟ್…

ಮೈಸೂರು,ಜು17,Tv10 ಕನ್ನಡಕೊಟ್ಟ ಸಾಲ ವಸೂಲಿ ಮಾಡಲು ಯುವಕನನ್ನ ಮಾರಕಾಸ್ತ್ರಗಳನ್ನ ತೋರಿಸಿ ಬಲವಂತವಾಗಿ ಎಳೆದೊಯ್ದು ಅಕ್ರಮವಾಗಿ ಬಂಧನದಲ್ಲಿರಿಸಿದ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.ಸುಮಾರು 30 ಮಂದಿ ತಂಡದಿಂದ ಕೃತ್ಯ ನಡೆದಿದೆ.ಪ್ರಕರಣ ದಾಖಲಿಸಿಕೊಂಡ ಕುವೆಂಪುನಗರ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ 7 ಮಂದಿಯನ್ನ ಬಂಧಿಸಿದ್ದಾರೆ.ವಾಜಮಂಗಲ ನಿವಾಸಿ ಹಾಗೂ ಆದಿಚುಂಚನಗಿರಿ ಕಾಲೇಜಿನ ವಿಧ್ಯಾರ್ಥಿಯಾಗಿದ್ದ ದರ್ಶನ್(20) ಅಪಹರಣಕ್ಕೆ ಒಳಗಾದ ಯುವಕ.ಪವನ್ ಹಾಗೂ ಈತನ ಸ್ನೇಹಿತರು ಅಪಹರಿಸಿದ ಆರೋಪಿಗಳು.ಜುಲೈ 13 ರಂದು ದರ್ಶನ್ ದಟ್ಟಗಳ್ಳಿಯ ಲೆಮೆನ್ ಟ್ರೀ ಹೋಟೆಲ್ ಬಳಿ ಇದ್ದಾಗ ಏಕಾಏಕಿ ಬಂದ ಪವನ್ ಹಾಗೂ 30 ಮಂದಿ ತಂಡ ಮಾರಕಾಸ್ತ್ರಗಳನ್ನ ತೋರಿಸಿ ಬೆದರಿಸಿ ವಾಹನವೊಂದರಲ್ಲಿ ಬಲವಂತವಾಗಿ ಕರೆದೊಯ್ದಿದ್ದಾರೆ.ಪವನ್ ನಿಂದ ದರ್ಶನ್ ಸಾಲ ಪಡೆದಿದ್ದ ಎನ್ನಲಾಗಿದೆ.ಸಮಯಕ್ಕೆ ಸರಿಯಾಗಿ ದರ್ಶನ್ ಹಣ ಹಿಂದಿರುಗಿಸಿಲ್ಲ.ಇದೇ ವಿಚಾರದಲ್ಲಿ ಪವನ್ ತನ್ನ ಸ್ನೇಹಿತರ ಜೊತೆ ಸೇರಿ ದರ್ಶನ್ ನ ಬಲವಂತವಾಗಿ ಕರೆದೊಯ್ದಿದ್ದಾನೆ.ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಣ ಪೀಕಲು ಯತ್ನಿಸಿದ್ದಾನೆ.ಸುಮಾರು 3 ಗಂಟೆಗಳ ಕಾಲ ಬಂಧನದಲ್ಲಿರಿಸಿ ಹಿಂಸೆ ನೀಡಿದ್ದಾನೆ ಎನ್ನಲಾಗಿದೆ.ಪವನ್ ಕಪಿಮುಷ್ಠಿಯಿಂದ ದರ್ಶನ್ ತಪ್ಪಿಸಿಕೊಂಡು ಬಂದಿದ್ದಾನೆ.ಈ ವಿಚಾರ ಮನೆಯಲ್ಲಿ ಹೇಳಿದ್ರೆ ಕೊಲೆ ಮಾಡುವುದಾಗಿ ಪವನ್ ಎಚ್ಚರಿಕೆ ನೀಡಿದ್ದಾನೆ.ಈ ಸಂಭಂಧ ದರ್ಶನ್ ತಂದೆ ಉಮೇಶ್ ರವರು ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಘಟನೆ ನಡೆದ 24 ಗಂಟೆಯಲ್ಲಿ ಪವನ್ ಸೇರಿದಂತೆ 7 ಮಂದಿಯನ್ನ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *